ಪ್ರಜಾಸ್ತ್ರ ಸುದ್ದಿ
ವಿಜಯಪುರ: ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ 16 ವರ್ಷದ ಬಾಲಕನೊಂದಿಗೆ 28 ವರ್ಷದ ಗೃಹಿಣಿ ಪರಾರಿಯಾಗಿರುವ ಘಟನೆ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದಲ್ಲಿ ನಡೆದಿದೆ. ಬಾಲಕ ಮಲ್ಲಿಕಾರ್ಜುನನ ತಾಯಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮಲ್ಲಿಕಾರ್ಜುನ ಹಿರೇಮಠ(16) ಹಾಗೂ ಮಲ್ಲಮ್ಮ(28) ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಇವರಿಬ್ಬರ ನಡುವಿನ ಪರಿಚಯ ಬೇರೆ ಸ್ವರೂಪ ಪಡೆದುಕೊಂಡಿದೆ. ಈ ಹಿಂದೆ ಮಹಿಳೆ ಹುಡುಗನಿಗೆ ಬೆಳ್ಳಿ ಸರ ಕೊಡಿಸಿದ್ದಳಂತೆ. ಇದನ್ನು ಆತನ ತಾಯಿ ಪ್ರಶ್ನಿಸಿದಾಗ ವಿಷ ಕುಡಿದಿದ್ದ. ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ತಾಯಿ ದೂರಿನಲ್ಲಿ ತಿಳಿಸಿದ್ದಾಳಂತೆ.
ಮೇ 13ರಂದು ಈ ಕುರಿತು ದೂರು ಸಲ್ಲಿಸಲಾಗಿದೆ. ಹುಡುಗನ ತಾಯಿ ಅಪಹರಣ ದೂರು ದಾಖಲಿಸಿದ್ದಾರೆ. ಮಲ್ಲಮ್ಮಗೆ ಎರಡು ಮಕ್ಕಳಿವೆ. ಇದರಲ್ಲಿ 4 ವರ್ಷದ ಮಗುವನ್ನು ಕರೆದುಕೊಂಡು ಹೋಗಿದ್ದಾಳೆ. ಆಕೆಯ ಕುಟುಂಬಸ್ಥರಿಂದ ಯಾವುದೇ ದೂರು ದಾಖಲಾಗಿಲ್ಲ. ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.