ಪ್ರಜಾಸ್ತ್ರ ಸುದ್ದಿ
ಮೈಸೂರು(Myesore): ಈ ಬಾರಿಯ ಮೈಸೂರು ದಸರಾವನ್ನು ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಸ್ತಾಕ್ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಜಿಲ್ಲಾಡಳಿತದಿಂದ ಅವರನ್ನು ಆಹ್ವಾನಿಸಲಾಗುವುದು. ಅವರ ಎದೆಗೆ ಹಣತೆ ಕೃತಿಗೆ ಬೂಕರ್ ಪ್ರಶಸ್ತಿ ದೊರೆತಿದ್ದು, ಸಂತಸ ತಂದಿದೆ ಎಂದಿದ್ದಾರೆ.
ರೈತ ಸಂಘ, ಕನ್ನಡ ಚಳವಳಿಯ ಜೊತೆಗೆ ಹೋರಾಟದ ಹಿನ್ನಲೆಯುಳ್ಳ ಬಾನು ಮುಷ್ತಾಕ್ ಅವರು ಪ್ರಗತಿಪರ ಚಿಂತಕಿಯೂ ಆಗಿದ್ದಾರೆ. ಅವರಿಂದಲೇ ದಸರಾ ಉದ್ಘಾಟಿಸಿ ಅವರನ್ನು ಸರ್ಕಾರ ಗೌರವಿಸುವ ಕೆಲಸ ಮಾಡುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.