ಪ್ರಜಾಸ್ತ್ರ ಸುದ್ದಿ
ದೇವರ ಹಿಪ್ಪರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕ ವಿಜಯಪುರ ವತಿಯಿಂದ 2025-26ನೇ ಸಾಲಿನ ಜಿಲ್ಲಾ ಪ್ರಶಸ್ತಿಗೆ ದೇವರ ಹಿಪ್ಪರಗಿ ತಾಲೂಕು ಕನ್ನಡಪ್ರಭ ವರದಿಗಾರ ಮಲ್ಲಿಕಾರ್ಜುನ ಪಟ್ಟಣಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ. ಜುಲೈ 19ರಂದು ವಿಜಯಪೂರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ನಡೆಯುವ ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ, ಉಸ್ತುವಾರಿ ಸಚಿವರು, ಸಚಿವರು, ಸಂಸದರು, ಶಾಸಕರು, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರು, ಸಂಘದ ರಾಜ್ಯಾಧ್ಯಕ್ಷರು, ಜಿಲ್ಲಾಧ್ಯಕ್ಷರು, ಹಿರಿಯ ಪತ್ರಕರ್ತರು, ಅಧಿಕಾರಿಗಳು ಸೇರಿದಂತೆ ಹಲವಾರು ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಪ್ರಕಟಣೆಯಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಸಂಗಮೇಶ ಉತ್ನಾಳ ತಿಳಿಸಿದ್ದಾರೆ.