ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಕೃಷ್ಣಾ ಭಾಗ್ಯಜಲ ನಿಗಮದಿಂದ ಮನವಿ ಮಾಡಿಕೊಳ್ಳಲಾಗಿದೆ. ಆಲಮಟ್ಟಿ ಜಲಾಶಕ್ಕೆ ಒಳಹರಿವಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಜಲಾಶಯದಿಂದ ನದಿ ಪಾತ್ರಕ್ಕೆ ನೀರು ಹರಿಬಿಡಲಾಗುತ್ತಿದೆ. ಹೀಗಾಗಿ ನದಿ ಪಾತ್ರದ ಗ್ರಾಮಗಳ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.