ಪ್ರಜಾಸ್ತ್ರ ಸುದ್ದಿ
ದಾವಣಗೆರೆ(Davanagere): ಬೆಸ್ಕಾ ಇಲಾಖೆಯ ಸಿವಿಲ್ ವಿಭಾಗದ ಎಇಇ ಆರ್.ಎಚ್ ಅರ್ಜುನ್ ಎಂಬುವರ ಮನೆ, ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಮುಂಜಾನೆ ದಾಳಿ ಮಾಡಿದ್ದಾರೆ. ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಮೇಲೆ ದಾಳಿ ನಡೆಸಲಾಗಿದೆ.
ದಾವಣಗೆರೆಯ ನಿಟ್ಟವಳಿ ಹತ್ತಿರ ಇರುವ ರೂಮ್, ರಿಪ್ಪನಪೇಟೆಯ ತಳಲೆ ಹತ್ತಿರವಿರುವ ತೋಟದ ಮನೆ, ಶಿವಮೊಗ್ಗದ ಗೋಪಾಳದಲ್ಲಿರುವ ವಾಣಿಜ್ಯ ಕಟ್ಟಡ ಸೇರಿದಂತೆ ಬೆಸ್ಕಾಂ ಕಚೇರಿಯ ಮೇಲೆ ದಾಳಿ ನಡೆಸಲಾಗಿದೆ. ಶಿವಮೊಗ್ಗ ಮೂಲದ ಅರ್ಜುನ್ ದಾವಣಗೆರೆಯಲ್ಲಿ ಕೆಲಸ ಮಾಡುತ್ತಿದ್ದಾರೆ.




