Ad imageAd image

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು

Nagesh Talawar
ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ದಕ್ಷಿಣ ಕನ್ನಡ(Dakshin Kannada): ರಾಷ್ಟ್ರೀಯ ಹಿಂದೂ ಜಾಗರಣೆ ವೇದಿಕೆ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಲಾಗಿದೆ. ಪುತ್ತೂರು ಎಸಿ ಅವರು 2ನೇ ಬಾರಿಗೆ ಗಡಿಪಾರು ಆದೇಶ ಹೊರಡಿಸಿದ್ದಾರೆ. ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿಗೆ ಒಂದು ವರ್ಷ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ.

ಈ ಹಿಂದೆ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. ಇದನ್ನು ಮರುಪರಿಶೀಲಿಸಲು ಕೋರ್ಟ್ ಹೇಳಿತ್ತು. ಹೀಗಾಗಿ ಮರುಪರಿಶೀಲನೆ ಮಾಡಿ ಡಿಸೆಂಬರ್ 17ರಂದು ಆದೇಶ ಹೊರಡಿಸಿದ್ದಾರೆ. ಬೆಳ್ತಂಗಡಿ ಪೊಲೀಸರು ಉಜಿರೆಯಲ್ಲಿರುವ ತಿಮರೋಡಿ ಮನೆಗೆ ಹೋದಾಗ ಮನೆಯಲ್ಲಿ ಇರಲಿಲ್ಲ ಎಂದು ತಿಳಿದು ಬಂದಿದೆ.

WhatsApp Group Join Now
Telegram Group Join Now
Share This Article