Ad imageAd image

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಕೊಲೆ, ನಾಲ್ವರ ಬಂಧನ

Nagesh Talawar
ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಕೊಲೆ, ನಾಲ್ವರ ಬಂಧನ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬಳ್ಳಾರಿ(Ballari): ಕೊಪ್ಪಳ ಜಿಲ್ಲೆ ಗಂಗಾವತಿಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನನ್ನು ಮಂಗಳವಾರ ತಡರಾತ್ರಿ ಕೊಲೆ ಮಾಡಲಾಗಿದೆ. ಈ ಪ್ರಕರಣ ಸಂಬಂಧ ಬುಧವಾರ ನಾಲ್ವರು ಆರೋಪಿಗಳನ್ನು ಬಳ್ಳಾರಿಯ ಕಂಪ್ಲಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಮೈಲಾರಿ ಅಲಿಯಾಸ್ ವಿಜಯ, ಭೀಮ, ಧನಂಜಯ ಹಾಗೂ ಸಲೀಂ ಅನ್ನೋ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೊಲೆಯಾದ ವೆಂಕಟೇಶ ಸ್ನೇಹಿತರೊಂದಿಗೆ ಊಟಕ್ಕೆ ಹೋಗಿದ್ದ. ವಾಪಸ್ ಬರುವಾಗ ರಾತ್ರಿ 2 ಗಂಟೆಯ ಸುಮಾರಿಗೆ ಗಂಗಾವತಿಯ ನಗರದ ಲೀಲಾವತಿ ಆಸ್ಪತ್ರೆಯ ಮುಂಭಾಗದಲ್ಲಿ ಆತನ ಬೈಕ್ ಗೆ ಕಾರು ಗುದ್ದಿಸಿ ಆತ ಬೀಳುತ್ತಿದ್ದಂತೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಹತ್ಯೆ ಮಾಡಿ ಪರಾರಿಯಾಗಿದ್ದರು. ಗಂಗಾವತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Group Join Now
Telegram Group Join Now
Share This Article