ಬೆನ್ನೂರ ಲೆಟರ್ ಹೆಡ್ ಗೆ ಮಾತ್ರ ಸೀಮಿತ: ರವಿಕುಮಾರ್ ಹೊಸಮನಿ

408

ಪ್ರಜಾಸ್ತ್ರ ಸುದ್ದಿ

ಸಿಂದಗಿ: ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ ಎಂ.ಬಿ ಪಾಟೀಲ ವಿರುದ್ಧ ಹೇಳಿಕೆ ನೀಡುತ್ತಿರುವ ಮಾದಿಗ ಮಹಾಸಭಾದ ಸ್ವಯಂ ಘೋಷಿತ ಅಧ್ಯಕ್ಷ ಬಾಗಲಕೋಟೆಯ ಮುತ್ತಣ್ಣ ಬೆನ್ನೂರ ಹೇಳಿಕೆಯನ್ನು ಖಂಡಿಸುತ್ತೇನೆ ಎಂದು ಸಿಂದಗಿ ತಾಲೂಕು ಕಾಂಗ್ರೆಸ್ ಸಾಮಾಜಿಕ ಜಾಲತಾಣ ಘಟಕದ ಅಧ್ಯಕ್ಷ ರವಿಕುಮಾರ್ ಹೊಸಮನಿ ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ಹಾಗೂ ಎಂ.ಬಿ ಪಾಟೀಲ ದಲಿತರನ್ನು ಹತ್ತಿಕ್ಕುತ್ತಿದ್ದಾರೆ ಅನ್ನೋ ಬೇಜವಾಬ್ದಾರಿ ಹೇಳಿಕೆಯನ್ನು ಮುತ್ತಣ್ಣ ಬೆನ್ನೂರ ನೀಡಿದ್ದಾರೆ. ಈ ಮೂಲಕ ಪರಿಷತ್ ಚುನಾವಣೆಯಲ್ಲಿ ಮುಗ್ದ ಜನರನ್ನು ಬಿಜೆಪಿಯತ್ತ ಸೆಳೆಯುವ ಯತ್ನ ನಡೆಸಲಾಗುತ್ತಿದೆ. ಲೆಟರ್ ಹೆಡ್ ಗೆ ಮಾತ್ರ ಸೀಮಿತವಾದ ಅಧ್ಯಕ್ಷ ಮುತ್ತಣ್ಣ ಬೆನ್ನೂರ ಯಾರದೋ ಓಲೈಕೆಗಾಗಿ ಇಂತಹ ಕೀಳುಮಟ್ಟದ ಹೇಳಿಕೆ ಕೊಡುವುದನ್ನು ನಿಲ್ಲಿಸಬೇಕು. ಇಲ್ಲದೆ ಹೋದರೆ ಮುಂದಿನ ದಿನಗಳಲ್ಲಿ ನಮ್ಮ ಸಮಾಜದಿಂದ ನಿಮಗೆ ತಕ್ಕ ಉತ್ತರ ಕೊಡಬೇಕಾಗುತ್ತದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ರವಿಕುಮಾರ ಹೊಸಮನಿ ತಿಳಿಸಿದ್ದಾರೆ.




error: Content is protected !!