ಪ್ರಜಾಸ್ತ್ರ ಸುದ್ದಿ
ಕಲಬುರಗಿ(Kalaburagi): ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದ ಬಿಜೆಪಿ ಪರಿಷತ್ ಸದಸ್ಯ ಎನ್.ರವಿಕುಮಾರ್ ಸೋಮವಾರ ಪೊಲೀಸರ ವಿಚಾರಣೆಗೆ ಹಾಜರಾದರು. ಕಲಬುರಗಿ ದಕ್ಷಿಣ ಸಹಾಯಕ ಪೊಲೀಸ್ ಆಯುಕ್ತರ ಕಚೇರಿಗೆ ಮೆರವಣಿಗೆ ಮೂಲಕ ಬಂದು ವಿಚಾರಣೆ ಎದುರಿಸಿದರು. ಈ ವೇಳೆ ಕಚೇರಿ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತಿ ನಿಯೋಜಿಸಲಾಗಿತ್ತು.
ಮೊದಲ ಎನ್.ರವಿಕುಮಾರ್ ಅವರು ಕಾರಿನಲ್ಲಿ ಬಂದಿದ್ದರು. ಪಕ್ಷದ ಮುಖಂಡರು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕಾರು ನಿಲ್ಲಿಸಿ, ಮೆರವಣಿಗೆ ಮೂಲಕ ಜೈಕಾರ ಹಾಕುತ್ತಾ ಸಹಾಯಕ ಪೊಲೀಸ್ ಆಯುಕ್ತರ ಕಚೇರಿಯವರೆಗೆ ನಡೆದರು. ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಿದ್ದಕ್ಕೆ ಬಿಜೆಪಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿ, ಅವರೇನು ಆತಂಕವಾದಿಗಳಾ, ಪಾಕಿಸ್ತಾನ ಪರ ಘೋಷಣೆ ಕೂಗುವರ ಬಳಿ ಹೋಗಿ ಎಂದು ಕಿಡಿ ಕಾರಿದರು.