ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಶನಿವಾರ ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಹೀಗಾಗಿ ಶಾಸಕರು ದೆಹಲಿಗೆ ಬರಬೇಡಿ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಈ ಕುರಿತು ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆಗೆ ಚರ್ಚೆ ನಡೆಸಲಾಗಿದೆ. ವೀಕ್ಷಕರಾಗಿ ಕೆ.ಸಿ ವೇಣುಗೋಪಾಲ, ರಣದೀಪ್ ಸಿಂಗ್ ಸುರ್ಜೇವಾಲ್ ಬರಲಿದ್ದಾರೆ ಎಂದು ತಿಳಿಸಲಾಗಿದೆ.
ನನಗೆ ಸಂಪುಟ ದರ್ಜೆಯ ಸಚಿವ ಸ್ಥಾನ ಸಿಗುವ ಭರವಸೆ ಇದೆ. 2023ರಲ್ಲಿ ಸಿಗಬೇಕಿತ್ತು. ಆದರೆ, ಸಿಕ್ಕಿರಲಿಲ್ಲ. ಈ ಕುರಿತು ಹೈಕಮಾಂಡ್ ನಾಯಕರು ತೀರ್ಮಾನಿಸಲಿದ್ದಾರೆ ಎಂದು ಸಲೀಂ ಅಹ್ಮದ್ ಹೇಳಿದ್ದಾರೆ. ಇನ್ನು ಸ್ವಇಚ್ಛೆಯಿಂದ ರಾಜ್ಯ ರಾಜಕಾರಣಕ್ಕೆ ಬಂದಿಲ್ಲ. 7 ಬಾರಿ ಸಂಸದನಾಗಿದ್ದೆ. ಕೇಂದ್ರ ಸಚಿವನಾಗಿದ್ದೆ. ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದು ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ. ಶನಿವಾರ ನಡೆಯಲಿರುವ ಸಿಎಲ್ ಪಿ ಸಭೆಯ ನಂತರ ನೂತನ ಮುಖ್ಯಮಂತ್ರಿಯ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದ ದಿನಾಂಕ ನಿಗದಿಯಾಗಲಿದೆ.



