LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಎಪಿಎಂಸಿ ಮಾರುಕಟ್ಟೆಗೆ ಸಿಎಂ ದಿಢೀರ್ ಭೇಟಿ

ರೈತರ ವಿಮೆ ಹಣ ಡಿಸಿಸಿ ಬ್ಯಾಂಕಿಗೆ ಕಟ್ಟದ ಅಧಿಕಾರಿ ವಿರುದ್ಧ ಕ್ರಮ

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಮಂಗಳವಾರ ಮುಂಜಾನೆ ಯಶವಂತಪುರದ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ಕೊಟ್ಟಿದ್ದಾರೆ. ಬೆಳೆಗಾರರು, ವರ್ತಕರು, ಮಂಡಿ ಮಾಲೀಕರು ಜೊತೆಗೆ ಮಾತುಕತೆಯನ್ನು ಮುಖ್ಯಮಂತ್ರಿಯವರು ನಡೆಸಿದ್ದಾರೆ.

ಈ ವೇಳೆ ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಇಟ್ಟನಹಳ್ಳಿ ಗ್ರಾಮದ ರೈತರು ಮುಖ್ಯಮಂತ್ರಿಯ ಮುಂದೆ, ಬೆಳೆ ವಿಮೆಗೆ ಸ್ವಸಹಾಯ ಸೊಸೈಟಿಗೆ ಹಣ ಕಟ್ಟಿದ್ದೇವೆ. ಆದರೆ, ಅಧಿಕಾರಿ ಡಿಸಿಸಿ ಬ್ಯಾಂಕಿಗೆ ಹಣ ಪಾವತಿ ಮಾಡದ ಕಾರಣ ನಮ್ಮ ವಿಮೆ ತಿರಸ್ಕೃತಗೊಂಡಿದೆ ಎಂದು ಅಳಲು ತೋಡಿಕೊಂಡಿದ್ದಾರೆ. ರೈತರು ಹಣ ಪಾವತಿ ಮಾಡಿದ ಪಟ್ಟಿ ಪರಿಶೀಲಿಸಿದ ಸಿಎಂ ನಿರ್ಲಕ್ಷ್ಯ ವಹಿಸಿದ ಕಾರ್ಯದರ್ಶಿಯನ್ನು ವಜಾಗೊಳಿಸುವಂತೆ ಸೂಚನೆ ನೀಡಿದರು. 93 ರೈತರ ವಿಮೆ ತಿರಸ್ಕಾರಗೊಂಡಿದೆ.

ಕಲಬುರಗಿ, ಬೀದರ, ವಿಜಯಪುರ ಮಾರುಕಟ್ಟೆಯಲ್ಲಿ 8 ರಿಂದ 10 ಸಾವಿರ ರೂಪಾಯಿ ಕಮಿಷನ್ ಪಡೆಯುತ್ತಾರೆ. ಬೆಂಗಳೂರಿನ ಯಶವಂತಪುರ ಮಾರುಕಟ್ಟೆಯಲ್ಲಿ ಕಮಿಷನ್ ಪಡೆಯಲ್ಲ. ಹೀಗಾಗಿ ಇಲ್ಲಿಗೆ ತಂದು ಹಾಕುತ್ತೇವೆ ಎಂದು ರೈತರು ಹೇಳಿದ್ದಾರೆ. ರೈತರಿಗೆ ತೂಕದಲ್ಲಿ ಮೋಸ, ಕಮಿಷನ್ ಪಡೆಯುವುದು ಮಾಡಿದರೆ ಕ್ರಮ ತೆಗೆದುಕೊಳ್ಳುತ್ತೇನೆ ಎಂದರು.

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST