ಪ್ರಜಾಸ್ತ್ರ ಸುದ್ದಿ
ದಾವಣಗೆರೆ(Davanagere): ಗಾಯಗೊಂಡಿದ್ದ ಚಿರತೆಯನ್ನು ರಕ್ಷಣೆ ಮಾಡುವ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ದಾಳಿ ಮಾಡಿದ ಘಟನೆ ಆನಗೋಡು ಹತ್ತಿರದ ರಾಷ್ಟ್ರೀಯ ಹೆದ್ದಾರಿ 48ರ ಬಳಿ ನಡೆದಿದೆ. ಸೋಮವಾರ ರಾತ್ರಿ ಅಪರಿಚಿತ ವಾಹನ ಡಿಕ್ಕಿಯಿಂದ ಗಾಯಗೊಂಡ ಚಿರತೆ ಹೆದ್ದಾರಿ ಹತ್ತಿರದ ಚರಂಡಿಯಲ್ಲಿ ನರಳುತ್ತಿತ್ತು.
ಈ ವಿಚಾರ ತಿಳಿದ ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿ ಮಂಗಳವಾರ ಮುಂಜಾನೆ ಸ್ಥಳಕ್ಕೆ ಬಂದಿದ್ದಾರೆ. ಚಿಕಿತ್ಸೆ ನೀಡುವ ಸಲುವಾಗಿ ಚಿರತೆ ಹಿಡಿಯುವ ವೇಳೆ ದಾಳಿ ಮಾಡಿದೆ. ಗಾಯಗೊಂಡ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಸಪೇಟೆಯಿಂದ ಬಂದ ವನ್ಯಜೀವಿ ಪಶುವೈದ್ಯರು ಅರವಳಿಕೆ ನೀಡಿದರು. ನಂತರ ಬಲೆ ಹಾಕಿ ಚಿರತೆ ಹಿಡಿಯಲಾಯಿತು.


