LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಲು ಜಿಲ್ಲಾಧಿಕಾರಿ ಸೂಚನೆ

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಮುಂಗಾರು ಪೂರ್ವ ಮಳೆ ಆರಂಭವಾಗಿದ್ದು, ಯಾವುದೇ ಸಂದರ್ಭದಲ್ಲಿ ತಲೆದೋರಬಹುದಾದ ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಅಧಿಕಾರಿಗಳು ಸರ್ವ ಸನ್ನದ್ದರಾಗಿರಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ.ಆನಂದ.ಕೆ ಅವರ ಅಧಿಕಾರಿಗಳಿಗೆ ಸೂಚಿಸಿದರು.

ಮುದ್ದೇಬಿಹಾಳ ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಪ್ರವಾಹಕ್ಕೆ ಸಂಬಂಧಿಸಿದಂತೆ ಪ್ರತಿ ಗ್ರಾಮಕ್ಕೊಬ್ಬ ನೋಡಲ್ ಅಧಿಕಾರಿಯನ್ನು ನೇಮಕ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಆಲಮಟ್ಟಿಗೆ ಕೃಷ್ಣಾ ನದಿಯಿಂದ ಹೆಚ್ಚುವರಿ ನೀರು ಹರಿಯಲಾರಂಭಿಸಿದರೆ ಮುದ್ದೇಬಿಹಾಳ ತಾಲೂಕಿನ ಕೆಲ ಹಳ್ಳಿಗಳು ಪ್ರವಾಹ ಪೀಡಿತವಾಗುವ ಸಂಭವವಿದೆ. ಈ ಕುರಿತು ಕೆಬಿಜೆನ್ನೆಲ್ ಅಧಿಕಾರಿಗಳು ಮುಂಜಾಗ್ರತೆ ವಹಿಸಬೇಕು ಎಂದರು.

ಇನ್ನೊಂದೆಡೆ ಸಾರ್ವಜನಿಕ ಸ್ಥಳದಲ್ಲಿ ಗಿಡ-ಗಂಟಿ, ಮತ್ತಿತರೆ ಶುಚಿಗೊಳಿಸಿ, ಅಲ್ಲಿ ಸೊಳ್ಳೆಗಳು ಉತ್ಪತ್ತಿಯಾಗದಂತೆ ಮುಂಜಾಗ್ರತಾ ಕ್ರಮ ವಹಿಸಬೇಕು. ಶಿಥಿಲಗೊಂಡ ಶಾಲಾ ಕಟ್ಟಡ ಹಾಗೂ ಅಂಗನವಾಡಿ ಕೇಂದ್ರಗಳ ಬಳಿ ಮಕ್ಕಳು ಸುಳಿಯದಂತೆ ನೋಡಿಕೊಳ್ಳಬೇಕು ಎಂದ ಅವರು, ಈ ಕುರಿತು ಮುನ್ಮೆಚ್ಚರಿಕೆ ಕ್ರಮ ವಹಿಸಬೇಕು. ಕುಡಿಯುವ ನೀರು ಕಲುಷಿತಗೊಳ್ಳದಂತೆ ಸ್ಥಳಗಳಲ್ಲಿ ಶುಚಿಗೊಳಿಸಬೇಕು.  ಮುಂಗಾರು ಹಂಗಾಮಿನಲ್ಲಿ ರೈತರು ಬಿತ್ತನೆಗೆ ಸಜ್ಜಾಗುತ್ತಿದ್ದಾರೆ. ಹಾಗಾಗಿ ಕೃಷಿ ಚಟುವಟಿಕೆಗಳಿಗೆ ಪೂರಕವಾಗಿ ಕೃಷಿ ಇಲಾಖೆ ಅಧಿಕಾರಿಗಳು ಬೀಜ ಮತ್ತು ರಸಗೊಬ್ಬರವನ್ನು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಮಾಡಿಕೊಳ್ಳಬೇಕು ಎಂದು ಕೃಷಿ ಅಧಿಕಾರಿಗಳಿಗೆ ಸೂಚಿಸಿದರು.

ಮುದ್ದೇಬಿಹಾಳ ತಹಶೀಲ್ದಾರ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಈ ಸಂದರ್ಭದಲ್ಲಿದ್ದರು. ಸಭೆಯ ಬಳಿಕ ಜಿಲ್ಲಾಧಿಕಾರಿಗಳು ತಾಳಿಕೋಟಿ ತಾಲೂಕಿನ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.  ತಾಳಿಕೋಟಿ ತಾಲೂಕಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾದಾಗ ತಾಳಿಕೋಟಿಯಿಂದ ವಿಜಯಪುರ ಮಾರ್ಗದಲ್ಲಿನ ಹಳೇ ಸೇತುವೆಯನ್ನು ಪರಿಶೀಲಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದರು. ಅಲ್ಲಿಯೇ ಹೊಸದಾಗಿ ನಿರ್ಮಾಣವಾಗುತ್ತಿರುವ ಸೇತುವೆಯ ಕಾಮಗಾರಿಯನ್ನು ಪರಿಶೀಲಿಸಿ ಕೆಆರ್ ಡಿಸಿಎಲ್ ಇಂಜಿನಿಯರ್ ಅವರಿಗೆ ತ್ವರಿತವಾಗಿ ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸಲು ಸೂಚಿಸಿದರು. ತಾಳಿಕೋಟಿಯಿಂದ ಮುದ್ದೇಬಿಹಾಳ ಮಾರ್ಗದಲ್ಲಿರುವ ಸೋಗಲಿ ಹಳ್ಳಕ್ಕೆ ನಿರ್ಮಾಣವಾಗುತ್ತಿರುವ ನೂತನ ಸೇತುವೆ ಕಾಮಗಾರಿಯನ್ನು ಸ್ಥಾನಿಕ ಪರಿಶೀಲನೆ ನಡೆಸಿ ಲೋಕೋಪಯೋಗಿ ಇಲಾಖೆ ಇಂಜನಿಯರ್ ಗಳಿಗೆ ತ್ವರಿತವಾಗಿ ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸಲು ಸೂಚಿಸಿದರು.

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST