LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಹಿಳೆ ಮೇಲೆ ಡಿವೈಎಸ್ಪಿ ಲೈಂಗಿಕ ದೌರ್ಜನ್ಯ?

ಪ್ರಜಾಸ್ತ್ರ ಸುದ್ದಿ

ತುಮಕೂರು(Tumakoru): ಪೊಲೀಸರನ್ನು ಆರಕ್ಷಕರು ಎನ್ನುತ್ತಾರೆ. ಆದರೆ ಇಲ್ಲಿ ರಕ್ಷಕರೆ ಭಕ್ಷಕರಾದ ಘಟನೆ ಗೃಹ ಸಚಿವ ಜಿ.ಪರಮೇಶ್ವರ್ ಅವರ ತವರು ಜಿಲ್ಲೆಯಲ್ಲೇ ನಡೆದಿದೆ. ಡಿವೈಎಸ್ಪಿ ಹಂತದ ಅಧಿಕಾರಿ ಮಹಿಳೆಯೊಬ್ಬರನ್ನು ದೈಹಿಕವಾಗಿ ಬಳಸಿಕೊಂಡ ವಿಡಿಯೋ ವೈರಲ್ ಆಗಿದೆ. ಜಮೀನು ವ್ಯಾಜ್ಯದ ವಿಚಾರವಾಗಿ ಕೇಳಲು ಬಂದ ಪಾವಗಡ ಮೂಲದ ಮಹಿಳೆಯನ್ನು ತಮ್ಮ ಕಚೇರಿಯಲ್ಲಿಯೇ ಬಳಸಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ಮಧುಗಿರಿ ಉಪವಿಭಾಗದ ಡಿವೈಎಸ್ಪಿ ರಾಮಚಂದ್ರಪ್ಪ ಎಂಬುವವರ ವಿರುದ್ಧ ಇಂತಹದೊಂದು ಗಂಭೀರ ಆರೋಪ ಕೇಳಿ ಬಂದಿದೆ. ಇವರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ತಲೆ ಮರೆಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಜಮೀನು ವಿಚಾರವಾಗಿ ಮಹಿಳೆ ದೂರು ನೀಡಿದ್ದಾಳೆ. ಆಕೆಯನ್ನು ವಿಚಾರಣೆಯ ನೆಪದಲ್ಲಿ ಡಿವೈಎಸ್ಪಿ ಕರೆಸಿದ್ದಾರೆ. ನಂತರ ಆಕೆಯನ್ನು ಯಾಮಾರಿಸಿ ಬಲವಂತವಾಗಿ ಲೈಂಗಿಕ ದೌರ್ಜನ್ಯವೆಸಗಿದ್ದಾರಂತೆ. ಇದನ್ನು ವ್ಯಕ್ತಿಯೊಬ್ಬರು ರೆಕಾರ್ಡ್ ಮಾಡಿಕೊಂಡಿದ್ದಾರೆ. ಈ ಬಗ್ಗೆ ಪೊಲೀಸ್ ಇಲಾಖೆಯ ಮೇಲಾಧಿಕಾರಿಗಳು, ಗೃಹ ಸಚಿವರು ಏನು ಹೇಳುತ್ತಾರೆ ನೋಡಬೇಕು.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST