LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಿರ್ಮಿತಿ ಕೇಂದ್ರದ ಎಂಜಿನಿಯರ್ ಆತ್ಮಹತ್ಯೆ?

ಪ್ರಜಾಸ್ತ್ರ ಸುದ್ದಿ

ಗದಗ(Gadaga): ರಾಜ್ಯದಲ್ಲಿ ಒಂದಲ್ಲ ಒಂದು ಆತ್ಮಹತ್ಯೆ ಪ್ರಕರಣಗಳು ಸರ್ಕಾರವನ್ನು ಸಂಕಷ್ಟಕ್ಕೆ ದೂಡುವಂತೆ ಮಾಡುತ್ತಿವೆ. ಕಲಬುರಗಿಯಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿರುವ ಹೊತ್ತಿನಲ್ಲಿಯೇ ಶುಕ್ರವಾರ ನಿರ್ಮಿತಿ ಕೇಂದ್ರದ ಎಂಜಿನಿಯರ್ ವೊಬ್ಬರು ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಂಕರಗೌಡ ಪಾಟೀಲ(54) ಆತ್ಮಹತ್ಯೆ ಮಾಡಿಕೊಂಡ ಎಂಜಿನಿಯರ್ ಆಗಿದ್ದಾರೆ.

ಗದಗ ನಗರದ ನಿವಾಸಿಯಾಗಿದ್ದಾರೆ. ಗುತ್ತಿಗೆ ಆಧಾರದ ಮೇಲೆ ನಿರ್ಮಿತಿ ಕೇಂದ್ರದ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಇಂದು ಮುಂಜಾನೆ ಸುಮಾರು 7.30ಕ್ಕೆ ಮನೆಯಿಂದ ಹೋಗಿದ್ದಾರೆ. ನಗರದ ಪಲ್ಲವಿ ಲಾಡ್ಜ್ ನಲ್ಲಿ ರೂಮ್ ಮಾಡಿದ್ದಾರೆ. ರೂಮ್ ನಂಬರ್ 513ರಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಹಲವು ಅನುಮಾನಗಳು ಮೂಡಿಸಿವೆ. ಆತನಿಗೆ ಯಾವುದೇ ಸಾಲ ಇರಲಿಲ್ಲ. ಸಾಕಷ್ಟು ಆಸ್ತಿ ಇದೆ. ಇದೊಂದು ಕೊಲೆ ಎಂದು ಮೃತನ ಸಹೋದರ ಹೇಳುತ್ತಿದ್ದು, ಪೊಲೀಸ್ ತನಿಖೆಯಿಂದ ಸತ್ಯಾಸತ್ಯತೆ ತಿಳಿದು ಬರಬೇಕಿದೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST