
ಅಮ್ಯೂಸ್ ಮೆಂಟ್ ಪಾರ್ಕ್ಗಾಗಿ ಯಾರನ್ನೂ ಒಕ್ಕಲೆಬ್ಬಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಈಗ ಇರುವ ಜಮೀನಿನಲ್ಲೆ ಯೋಜನೆ ಮಾಡಲಾಗುವುದು. ಸುರಕ್ಷತೆಯ ದೃಷ್ಟಿಯಿಂದ ಮಧ್ಯದಲ್ಲಿ ಯಾವುದಾದರೂ ಭೂಮಿ ಇದ್ದರೆ ಅದನ್ನು ಪಡೆಯಲಾಗುವುದು. ತಾಂತ್ರಿಕ ಸಮಿತಿ ವರದಿಯ ನಂತರ ತೀರ್ಮಾನ ಮಾಡಲಾಗುವುದು. ಡ್ಯಾಂ ಸುರಕ್ಷತೆಯ ದೃಷ್ಟಿಯಿಂದ ಟ್ರಯಲ್ ಬ್ಲಾಸ್ಟ್ ನಿಲ್ಲಿಸಲಾಗುವುದು. ಅಣೆಕಟ್ಟಿನ ಸುರಕ್ಷತೆಯ ದೃಷ್ಟಿಯಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ. ನಮಗೆ ಎಲ್ಲಿ ಬೇಕಾದರೂ ಕಲ್ಲು ಸಿಗುತ್ತದೆ. ಡ್ಯಾಂ ಮತ್ತೆ ಸಿಗುವುದಿಲ್ಲ. ಜಿಲ್ಲಾ ಸಚಿವರು ಮುಖ್ಯಮಂತ್ರಿಗಳ ಗಮನಕ್ಕೆ ಅನೇಕ ವಿಚಾರಗಳನ್ನು ತಂದಿದ್ದಾರೆ ಎಂದರು.

ಸದ್ಯಕ್ಕೆ ಮೇಕೆದಾಟು ಯೋಜನೆ ಬಗ್ಗೆ ಉತ್ತರ ನೀಡುವುದಿಲ್ಲ. ಕಾಲವೇ ಅದಕ್ಕೆ ಉತ್ತರ ಕೊಡುತ್ತದೆ. ನಾವು ಸಲ್ಲಿಸಿರುವ ದಾಖಲೆಗಳು ಈ ಯೋಜನೆಗೆ ಭದ್ರ ಅಡಿಪಾಯ ಹಾಕಿದ್ದು, ನ್ಯಾಯಾಲಯವೇ ಈ ವಿಚಾರವಾಗಿ ತೀರ್ಮಾನ ಮಾಡಲಿದೆ” ಎಂದರು. ವಿಧಾನಸಭೆ ಮುಗಿದ ನಂತರ ಬಾಗಿನ ಅರ್ಪಣೆಗೆ ದಿನಾಂಕ ತೀರ್ಮಾನ ಮಾಡಲಾಗುವುದು ಎಂದು ತಿಳಿಸಿದರು. ಬಿಳಿಗುಂಡ್ಲುವಿನಲ್ಲಿ ದಾಖಲಾದಂತೆ ಇದುವರೆಗು ತಮಿಳುನಾಡಿಗೆ 30 ಟಿಎಂಸಿ ನೀರನ್ನು ಹರಿಸಲಾಗಿದೆ. 10 ಟಿಎಂಸಿ ನೀರನ್ನು ಹರಿಸಿದರೆ ಸಾಮಾನ್ಯ ವರ್ಷದಲ್ಲಿ 40 ಟಿಎಂಸಿ ನೀರು ಹರಿಸಿದಂತಾಗುತ್ತದೆ. ನಿತ್ಯ 51 ಸಾವಿರ ಕ್ಯೂಸೆಕ್ಸ್ ನೀರನ್ನು ಕಾವೇರಿ ಜಲಾನಯನ ಪ್ರದೇಶದಿಂದ ಹರಿಸಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.



