ಪ್ರಜಾಸ್ತ್ರ ಸುದ್ದಿ
ಮಂಗಳೂರು: ಶನಿವಾರ ಮುಂಜಾನೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಲ್ಲಿನ ಮೀನುಗಾರಿಕೆ ಬಂದರಿಗೆ ಭೇಟಿ ನೀಡಿದರು. ಇಲ್ಲಿ ಪ್ರಗತಿಯಲ್ಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಮೀನುಗಾರರ ಜೊತೆಗೆ ಸಂವಾದ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿದರು. ಈ ಬಗ್ಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ತಿಳಿಸಿದರು.
ಈ ವೇಳೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಸಚಿವ ಯು.ಟಿ.ಖಾದರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು. ಅಂಜಲ್ ಮೀನನ್ನು ಮುಖ್ಯಮಂತ್ರಿಗೆ ಇಲ್ಲಿನ ಜನರು ಉಡುಗರೆಯಾಗಿ ನೀಡಿದರು.


