LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗೋಹತ್ಯೆ ನಿಷೇಧ ಆದೇಶ ಪ್ರಶ್ನಿಸಿ ಸುಪ್ರೀಂಗೆ ಮನವಿ

ಪ್ರಜಾಸ್ತ್ರ ಸುದ್ದಿ

ಚೆನ್ನೈ(Chennai): ಗೋಹತ್ಯೆ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿರುವ ಆದೇಶ ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲು ಏರಿದೆ. ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಆಗಲಿ ಅಥವ ಉಳಿದ ಸಮದಲ್ಲಾಗಲಿ ಹಸು ಅಥವ ಕರು ಹತ್ಯೆ ಮಾಡದಂತೆ ನೋಡಿಕೊಳ್ಳಲು ಪೊಲೀಸ್ ಮಹಾನಿರ್ದೇಶಕರು ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡಿದೆ.

ಹೈಕೋರ್ಟ್ ಆದೇಶವು ತಮಿಳುನಾಡು ಪ್ರಾಣಿ ಸಂರಕ್ಷಣೆ ಕಾಯ್ದೆ-1958ಕ್ಕೆ ವಿರುದ್ಧವಾಗಿದೆ ಎಂದು ಹೇಳಿ ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಿದೆ. ಈ ಕಾಯ್ದೆಯ ಪ್ರಕಾರ ಸಕ್ಷಮ ಅಧಿಕಾರಿಯಿಂದ ನೀಡುವ ಪ್ರಮಾಣ ಪತ್ರದ ಆಧಾರದ ಮೇಲೆ ಕೆಲಸಕ್ಕೆ ಹಾಗೂ ಸಂತಾನೋತ್ಪತ್ತಿಗೆ ಯೋಗ್ಯವದಲ್ಲದ 10 ವರ್ಷಕ್ಕಿಂತ ಮೇಲ್ಪಟ್ಟ ಹಸುಗಳನ್ನು ಹತ್ಯೆ ಮಾಡಲು ಅನುಮತಿ ನೀಡುತ್ತದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಹಿಂದೂ ಮಕ್ಕಳ್ ಕಚ್ಚಿ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿ, ರಾಜ್ಯದ ತುಂಬಾ ಗೋಹತ್ಯೆ ನಿಷೇಧಿಸಿ ಆದೇಶ ನೀಡಿದೆ. ಇದನ್ನು ಪ್ರಶ್ನಿಸಿ ಮುಖ್ಯಮಂತ್ರಿ ವಿಜಯ್ ನೇತೃತ್ವದ ಸರ್ಕಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದೆ.

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST