ಪ್ರಜಾಸ್ತ್ರ ಸುದ್ದಿ
ಸಿಂದಗಿ(Sindagi): ನಗರದ ಪ್ರತಿಷ್ಠಿತ ಪಾರ್ವತಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಅರ್ಚನಾ ಫೌಂಡೇಶನ್ ವತಿಯಿಂದ ಗಣೇಶ ಹಬ್ಬದ ಪ್ರಯುಕ್ತ ಶುಕ್ರವಾರ ಅನ್ನಪ್ರಸಾದದ ವ್ಯವಸ್ಥೆಯನ್ನು ಮಾಡಲಾಗಿತ್ತು. ಗಣೇಶ ಚತುರ್ಥಿಯ ಪ್ರಯುಕ್ತ ಆಸ್ಪತ್ರೆಯಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪಿಸಲಾಗಿತ್ತು. 5ನೇ ದಿನವಾದ ಶುಕ್ರವಾರ ವಿಶೇಷ ಪೂಜೆ ಸಲ್ಲಿಸಿ ಭಕ್ತರಿಗೆ, ಆಸ್ಪತ್ರೆಗೆ ಬಂದಂತಹ ಸಾರ್ವಜನಿಕರಿಗೆ ಅನ್ನ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.

ಆಸ್ಪತ್ರೆಯ ಸಿಇಒ ಹಾಗೂ ಅರ್ಚನಾ ಫೌಂಡೇಶನ್ ಅಧ್ಯಕ್ಷ ಡಾ.ಅರ್ಜುನ ಗೊಣಗುಣಕಿ, ಮುಗುಳುನಗೆ ಆಸ್ಪತ್ರೆಯ ವೈದ್ಯ ಹಾಗೂ ಫೌಂಡೇಶನ್ ಕಾರ್ಯದರ್ಶಿ ಡಾ.ಚನ್ನಬಸವ ಗೊಟಗಣಕಿ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿ, ಫೌಂಡೇಶನ್ ಪದಾಧಿಕಾರಿಗಳು ಈ ವೇಳೆ ಉಪಸ್ಥಿತಿರಿದ್ದರು.


