LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಿಂದಗಿ: ಪುರಸಭೆ ಸಿಬ್ಬಂದಿ ಖ್ಯಾತಪ್ಪ ಕುಂಬಾರ ಅಮಾನತು

ಪ್ರಜಾಸ್ತ್ರ ಸುದ್ದಿ

ಸಿಂದಗಿ(Sindagi): ಡಾ.ಬಿ.ಆರ್ ಅಂಬೇಡ್ಕರ್ ನಗರ ವಸತಿ ಯೋಜನೆ ಅಡಿಯಲ್ಲಿ ಅನಧಿಕೃತವಾಗಿ ಬರೋಬ್ಬರಿ 54 ಜನರನ್ನು ನೇರವಾಗಿ ನಮೂನೆ-4ಬಿಯಲ್ಲಿ ಹೆಸರು ಸೇರ್ಪಡೆ ಮಾಡಿರುವುದು ತನಿಖೆಯಲ್ಲಿ ಕಂಡು ಬಂದಿದೆ. ಈ ಸಂಬಂಧ ವಸತಿ ವಿಭಾಗದ ಪ್ರಥಮ ದರ್ಜೆ ಸಹಾಯಕ ಖ್ಯಾತಪ್ಪ ಎಂ.ಕುಂಬಾರ ಎಂಬುವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಪರಿಶಿಷ್ಟ ಜಾತಿ ಫಲಾನುಭವಿಗಳ ಬದಲಾಗಿ ಹಿಂದುಳಿದ ವರ್ಗಗಳ ಪ್ರವರ್ಗ-2(ಎ) ಸೇರ್ಪಡೆ ಮಾಡಿರುವ ಸಂಬಂಧ ಕಾರಣ ಕೇಳಿ ನೋಟಿಸ್ ನೀಡಲಾಗಿತ್ತು. ಲಿಖಿತ ರೂಪದ ಹೇಳಿಕೆಗೆ ಯಾವುದೇ ರೀತಿಯ ಸೂಕ್ತ ದಾಖಲೆಗಳನ್ನು ಒದಗಿಸಿದ ಕಾರಣ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಅಮಾನತುಗೊಳಿಸಿದ್ದಾರೆ.

ಪತ್ರಕರ್ತ ಶಿವಾನಂದ ಬಿ.ಆಲಮೇಲ ಅವರು ಈ ಪ್ರಕರಣದ ಕುರಿತು ದೂರು ಸಲ್ಲಿಸಿದ್ದರು. ಈ ಸಂಬಂಧ ಜಿಲ್ಲಾ ನಗರಾಭಿವೃದ್ಧಿ ಕೋಶದ ವಸತಿ ವಿಭಾಗದ ನಗರ ಮಟ್ಟದ ತಾಂತ್ರಿಕ ಕೋಶದ ತಜ್ಞರು ಸಿಂದಗಿ ಪುರಸಭೆಯ ವಸತಿ ಯೋಜನೆಗೆ ಸಂಬಂಧಿಸಿದಂತೆ ಪರಿಶೀಲಿಸಿ ವರದಿ ಸಲ್ಲಿಸಿದ್ದಾರೆ. ಅದರಲ್ಲಿ 2021-22ನೇ ಸಾಲಿಗೆ ಸಿಂದಗಿ ಪುರಸಭೆಗೆ ಹೆಚ್ಚುವರಿಯಾಗಿ ಡಾ.ಬಿ.ಆರ್ ಅಂಬೇಡ್ಕರ್ ನಗರ ವಸತಿ ಯೋಜನೆ ಅಡಿಯಲ್ಲಿ 181 ಹಾಗೂ ವಾಜಪೇಯಿ ನಗರ ವಸತಿ ಯೋಜನೆ ಅಡಿಯಲ್ಲಿ 569 ಸೇರಿ 750 ಗುರಿಗಳಲ್ಲಿ ಆಶ್ರಯ ಸಮಿತಿಯಲ್ಲಿ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. ಹೀಗೆ ಆಯ್ಕೆ ಮಾಡಿದ ಫಲಾನುಭವಿಗಳಲ್ಲಿ ಆಶ್ರಯ ಸಮಿತಿಯಲ್ಲಿ 37, ಡಾ.ಬಿ.ಆರ್ ಅಂಬೇಡ್ಕರ್ ನಗರ ವಸತಿ ಯೋಜನೆ ಅಡಿಯಲ್ಲಿ 17 ಸೇರಿದಂತೆ 54 ಜನರ ಹೆಸರನ್ನು ಅನಧಿಕೃತವಾಗಿ ನೇರವಾಗಿ ಸೇರ್ಪಡೆ ಗಂಭೀರ ಸ್ವರೂಪದ ಕರ್ತವ್ಯಲೋಪ ಎಸಗಿರುವುದು ಕಂಡು ಬಂದ ಹಿನ್ನಲೆಯಲ್ಲಿ ಖ್ಯಾತಪ್ಪ ಎಂ.ಕುಂಬಾರ ಎಂಬುವವರನ್ನು ಅಮಾನತುಗೊಳಿಸಲಾಗಿದೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST