ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ದೇಶವ್ಯಾಪಿ ಬೃಹತ್ ಪ್ರತಿಭಟನೆ ನಡೆಸಲಾಗಿತ್ತು. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಿಜೆಪಿ ನೇತೃತ್ವದಲ್ಲಿ ನಡೆದ ಪ್ರತಿಭಟನೆ ವೇಳೆ ಹಿಂಸಾಚಾರ ನಡೆದ ಆರೋಪದ ಮೇಲೆ ಪ್ರತಿಭಟನಾಕಾರರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಇದನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ.
ಜುಲೈನಲ್ಲಿ ನಡೆದ ಪ್ರತಿಭಟನೆ ವೇಳೆ ಭಾಗವಹಿಸಿದ ವಿದ್ಯಾರ್ಥಿಗಳ ವಿರುದ್ಧ ದಾಖಲಾದ ಎಫ್ಐಆರ್ ಗಳನ್ನುರದ್ದುಗೊಳಿಸುವಂತೆ ದೆಹಲಿ ಪೊಲೀಸರು, ಮಹಾರಾಷ್ಟ್ರ, ಬಿಹಾರ, ಅಸ್ಸಾ, ಪಶ್ಚಿಮ ಬಂಗಾಳ ರಾಜ್ಯಗಳು ಸಲ್ಲಿಸಿದ ಅರ್ಜಿಯನ್ನು ವಿಚಾರಣೆ ನಡೆಸಲಾಯಿತು. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ವಿ.ಮೋಹನಾ, ಜಾಯ್ ಮಾಲ್ಯಾ ಬಾಗ್ಚಿ ಅವರಿದ್ದ ಪೀಠ ಎಫ್ಐಆರ್ ರದ್ದುಗೊಳಿಸಿ ಆದೇಶ ಹೊರಡಿಸಿದೆ.
ಸಂವಿಧಾನದ 142ನೇ ವಿಧಿಯಡಿ ಸುಪ್ರೀಂ ಕೋರ್ಟ್ ಗೆ ಇರುವ ವಿಶೇಷ ಅಧಿಕಾರ ಬಳಸಿ ಎಫ್ಐಆರ್ ರದ್ದುಗೊಳಿಸುವಂತೆ ಭಾರತ ಸರ್ಕಾರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮನವಿ ಮಾಡಿದ್ದರು.



