LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದೆಹಲಿ ಜನತೆಯ ಚಾರಿತ್ರಿಕ ಜಯ: ವಿಜಯೇಂದ್ರ

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಇದರೊಂದಿಗೆ ದಶಕಗಳ ಬಳಿಕ ಆಡಳಿತದ ಚುಕ್ಕಾಣಿ ಹಿಡಿಯುತ್ತಿದೆ. ಈ ಬಗ್ಗೆ ಮಾತನಾಡಿರುವ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ದೆಹಲಿ ಗೆಲುವು ಕರ್ನಾಟಕದಲ್ಲಿಯೂ ಪ್ರತಿಫಲಿಸಲಿದೆ ಎಂದು ಹೇಳಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ದೆಹಲಿ ಮತದಾರರಿಗೆ ಕೃತಜ್ಞತೆಗಳು ಹಾಗೂ ಮೋದಿ ಅವರನ್ನು ಕರ್ನಾಟಕದ ಜನರ ಪರವಾಗಿ ಅಭಿನಂದಿಸುತ್ತೇನೆ ಎಂದಿದ್ದಾರೆ.

ಭಾರತವನ್ನು ಸಮರ್ಥವಾಗಿ ಮುನ್ನಡೆಸುತ್ತಿರುವ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜಿ ಅವರ ನಾಯಕತ್ವಕ್ಕೆ ಶಕ್ತಿ ತುಂಬುವ ದೇಶವನ್ನು ದೆಹಲಿಯ ಜನತೆ ಬಿಜೆಪಿ ಗೆಲ್ಲಿಸುವ ಮೂಲಕ ಪಸರಿಸಿದ್ದಾರೆ. ವಿಕಸಿತ ಭಾರತದ ಸಂಕಲ್ಪ ತೊಟ್ಟು ದೇಶವನ್ನು ಜಾಗತಿಕ ಮಟ್ಟದಲ್ಲಿ ಬಲಿಷ್ಟಗೊಳಿಸಲು ಯೋಜನೆ ರೂಪಿಸುತ್ತಿರುವ ಪ್ರಧಾನಿಯವರಿಗೆ ದೇಶದ ರಾಜಧಾನಿಯ ಗೆಲುವು ಭೀಮ ಬಲವನ್ನು ತಂದು ಕೊಟ್ಟಿದೆ. ರಾಷ್ಟ್ರೀಯ ಅಧ್ಯಕ್ಷರಾದ ಜಿ.ಪಿ ನಡ್ಡಾಜೀ ಹಾಗೂ ಗೃಹ ಸಚಿವರಾದ ಮಾನ್ಯ ಅಮಿತ್ ಶಾಜೀಯವರ  ನೇತೃತ್ವದಲ್ಲಿ ಭಾರತೀಯ ಜನತಾ ಪಾರ್ಟಿ ಹೆಗ್ಗಳಿಕೆಯ ವಿಜಯ ಸಾಧಿಸಿದೆ.

ದೆಹಲಿಯ ಆಡಳಿತದ ಚುಕ್ಕಾಣಿಯನ್ನು ಬಿಜೆಪಿ ಮಡಿಲಿಗೆ ಸಮರ್ಪಿಸಿರುವ ದೆಹಲಿಯ ಜನತೆಯ ಆಶೋತ್ತರಗಳನ್ನು ಈಡೇರಿಸಲು ಪ್ರಧಾನಿ ಶ್ರೀನರೇಂದ್ರ ಮೋದಿಜೀಯವರ ಮಾರ್ಗದರ್ಶನದಲ್ಲಿ ನೂತನ ಸರ್ಕಾರ ಕಟಿಬದ್ಧವಾಗಿ ಕೆಲಸ ಮಾಡಲಿದೆ ಎನ್ನುವುದು ದೆಹಲಿ ಚುನಾವಣೆಗಾಗಿ ಶ್ರಮಿಸಿದ ಪ್ರತಿಯೊಬ್ಬ ಪಕ್ಷ ಪ್ರಮುಖರು ಹಾಗೂ ಕಾರ್ಯಕರ್ತರ ಅಭಯವಾಗಿದೆ. ಈ ಚುನಾವಣೆ ಬಿಜೆಪಿ ಕಾರ್ಯಕರ್ತರು ಹಾಗೂ ದೆಹಲಿ ಜನತೆಯ ಚಾರಿತ್ರಿಕ ಜಯವಾಗಿದೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST