ಪ್ರಜಾಸ್ತ್ರ ಸುದ್ದಿ
ಉಡುಪಿ(Udupi): ಮಗನೇ ತಂದೆ ಹಾಗೂ ತಾಯಿಯನ್ನು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಬ್ರಹ್ಮಾವರದ ಗಾಂಧಿನಗರದಲ್ಲಿ ಭಾನುವಾರ ರಾತ್ರಿ ನಡೆದಿದೆ. ಸುತ್ತಿಗೆಯಿಂದ ಹೆತ್ತವರನ್ನು ಹೊಡೆದು ಕೊಲೆ ಮಾಡಿದ್ದಾನೆ. ಆರೋಪಿ ಶಾಹಿದ್ ಅಲಿ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೆಹಬೂಬ್ ಅಲಿ ಹಾಗೂ ಇವರ ಪತ್ನಿ ಶಂಶಾದ್ ಬೇಗಂ ಅವರು ಕೊಲೆಯಾದವರು. ಮೆಹಬೂಬ್ ಅಲಿ ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಇವರ ಮಗ ಶಾಹಿದ್ ಅಲಿ ಫುಡ್ ಡೆಲಿವರಿ ಕೆಲಸ ಮಾಡುತ್ತಿದ್ದ. ಯಾವ ಕಾರಣಕ್ಕೆ ತಂದೆ, ತಾಯಿಯನ್ನು ಕೊಲೆ ಮಾಡಿದ್ದಾನೆ ಅನ್ನೋದು ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ.



