ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅಂಗವಾಗಿ ಜೂನ್ 30ರಿಂದ ಬಿಎಲ್ ಓಗಳು ಮನೆ ಮನೆ ಭೇಟಿ ನೀಡುತ್ತಿದ್ದಾರೆ. ಹೀಗಾಗಿ ಇಂದು ಜಿಲ್ಲೆಯ ಶಾಸಕರ ಮನೆಗಳಿಗೆ ತೆರಳಿ ಗಣತಿ ನಮೂನೆ ವಿತರಣೆ ಮಾಡಿದರು. ಮಾಜಿ ಸಚಿವ, ಶಾಸಕ ಶಿವಾನಂದ ಪಾಟೀಲ, ಶಾಸಕ ವಿಠ್ಠಲ ಕಟಕದೊಂಡ, ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ, ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೇರಿದಂತೆ ರಾಜಕೀಯ ನಾಯಕರು, ಹಿರಿಯ ಅಧಿಕಾರಿಗಳ ಮನೆಗಳಿಗೆ ತೆರಳಿ ನಮೂನೆ ವಿತರಣೆ ಮಾಡಿದರು.

ಜೂನ್ 30ರಂದು ಜುಲೈ 29ರ ತನಕ ಬಿಎಲ್ಓಗಳು ಪ್ರತಿ ಮನೆ ಮನೆಗೆ ಭೇಟಿ ನೀಡಿ ಗಣತಿ ನಮೂನೆಗಳನ್ನು ವಿತರಣೆ ಮಾಡಲಿದ್ದಾರೆ. ಅದನ್ನು ಭರ್ತಿ ಮಾಡಿ ಅಧಿಕಾರಿಗಳಿಗೆ ವಾಪಸ್ ನೀಡಬೇಕು. ಇದಕ್ಕೆ ಸಂಬಂಧಿಸಿದಂತೆ ಆಯಾ ತಾಲೂಕುಗಳಲ್ಲಿ ಸಹಾಯವಾಣಿ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗಿದೆ. ಅಲ್ಲಿಗೆ ಫೋನ್ ಮಾಡುವ ಮೂಲಕ ಮಾಹಿತಿ ಪಡೆದುಕೊಳ್ಳಬಹುದಾಗಿದೆ.



