ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ರಾಜ್ಯ ಸರ್ಕಾರ ಬರಗಾಲಪೀಡಿತ ತಾಲೂಕುಗಳ ಮೂರನೇ ಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದೆ. 53 ತಾಲೂಕುಗಳನ್ನು ಬರಗಾಲಪೀಡಿತವೆಂದು ಘೋಷಿಸಲಾಗಿದ್ದು, ಮಳೆಯ ಪ್ರಮಾಣದ ಮೇಲೆ ತೀವ್ರ, ಮಧ್ಯಮ ಎಂದು ಘೋಷಿಸಲಾಗಿದೆ. ವಿಜಯಪುರ ಜಿಲ್ಲೆಯ ಸಿಂದಗಿ, ಆಲಮೇಲ, ದೇವರ ಹಿಪ್ಪರಗಿ ಹಾಗೂ ಮುದ್ದೇಬಿಹಾಳ ತಾಲೂಕುಗಳನ್ನು ಈ ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ.
ಸಿಂದಗಿ ತಾಲೂಕನ್ನು ತೀವ್ರ ಬರಪೀಡಿತವೆಂದು, ಆಲಮೇಲ, ದೇವರ ಹಿಪ್ಪರಿ, ಮುದ್ದೇಬಿಹಾಳ ತಾಲೂಕುಗಳನ್ನು ಮಧ್ಯಮ ಬರಪೀಡಿತವೆಂದು ಘೋಷಿಸಲಾಗಿದೆ. ಈ ಮೂಲಕ 13 ತಾಲೂಕುಗಳ ಪೈಕಿ 10 ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಲಾಗಿದೆ. ಇಂಡಿ, ಚಡಚಣ ಹಾಗೂ ತಾಳಿಕೋಟೆ ತಾಲೂಕುಗಳ ಹೆಸರು ಈ ಪಟ್ಟಿಯಲ್ಲಿ ಇಲ್ಲ. ಮುಂದಿನ ದಿನಗಳಲ್ಲಿ ನಿಗದಿತ ನಿಯಮಗಳ ಅನುಸಾರ ಘೋಷಣೆಯಾಗಲಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ತಮ್ಮ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿದ್ದಾರೆ.


