ಪಜಾಸ್ತ್ರ ಸುದ್ದಿ
ದೆಹಲಿ(Delhi): ದೇಶಿಯ ಕ್ರೀಡೆಗಳಲ್ಲಿ ಭಾಗವಹಿಸಲು ಕುಸ್ತಿಪಟು ವಿನೀಶ್ ಫೋಗೆಟ್ ಅವರನ್ನು ಅನರ್ಹ ಎಂದು ಭಾರತೀಯ ಕುಸ್ತಿ ಒಕ್ಕೂಟ ಘೋಷಿಸಿದೆ. ಈ ಸಂಬಂಧ ಹೈಕೋರ್ಟ್ ಮೆಟ್ಟಿಲು ಏರಿದ್ದು, ದೆಹಲಿ ಹೈಕೋರ್ಟ್ ತರಾಟೆ ತೆಗೆದುಕೊಂಡಿದೆ. ಈ ಪ್ರಕರಣದ ತನಿಖೆ ಮಾಡಲು ಹಾಗೂ ಮೌಲ್ಯಮಾಪನ ಮಾಡಲು ತಜ್ಞರ ಸಮಿತಿಯನ್ನು ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಿದೆ.
ವಿಚಾರಣೆ ವೇಳೆ ಕ್ರೀಡಾಪಟುಗಳು ಹಾಗೂ ಸಂಘದ ನಡುವಿನ ವಿವಾದವು ಕ್ರೀಡೆಯ ಮೇಲೆ ಪರಿಣಾಮ ಬೀರಬಾರದು ಎಂದು ಸ್ಪಷ್ಟವಾಗಿ ಹೇಳಿದೆ. ಕುಸ್ತಿ ಮತ್ತು ಕ್ರೀಡಾಪಟುಗಳ ಹಿತಾಸಕ್ತಿಯನ್ನು ಸಹ ಕೋರ್ಟ್ ಗಮನಿಸಿದೆ. ಭಾರತೀಯ ಕುಸ್ತಿ ಒಕ್ಕೂಟದಲ್ಲಿ ನಡೆಯುತ್ತಿರುವ ಆಂತರಿಕ ಕಲಹದ ಹಿನ್ನಲೆ ಏನು ಎಂದು ಕೇಳಿದೆ.



