LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಿಂದಗಿ: ಕೆಆರ್ ಎಸ್ ನಿಂದ ಯುವ ನೇತಾ ಬೈಠಕ್ ಅಭಿಯಾನ

ಪ್ರಜಾಸ್ತ್ರ ಸುದ್ದಿ

ಸಿಂದಗಿ(Sindagi): ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಸಿಂದಗಿ ತಾಲೂಕಿನ ಪ್ರತಿಯೊಂದು ಗ್ರಾಮದಲ್ಲಿ ಯುವನೇತಾ ಬೈಠಕ್ ಅಭಿಯಾನ ಮಾಡಲಾಗುವುದು. ಈ ಮೂಲಕ ಬಡ, ಮಧ್ಯಮ ವರ್ಗದವರು ಸೇರಿದಂತೆ ಎಲ್ಲ ಸಮುದಾಯದ ಯುವಕರು ನಾಯಕರಾಗಬೇಕು ಎಂದು ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ ಹೇಳಿದರು. ಬುಧವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದರು.

ಈಗಿನ ರಾಜಕೀಯ ಪಕ್ಷಗಳು ಯುವಕರನ್ನು ಗುಲಾಮರನ್ನಾಗಿ ಮಾಡುತ್ತಿದ್ದಾರೆ. ಹಣ ಬಲದಿಂದ, ವಂಶಪರಂಪರೆಯಾಗಿ ಆಡಳಿತ ನಡೆಸಬೇಕು ಎನ್ನುತ್ತಾರೆ. ಭಷ್ಟಾಚಾರ, ಅನ್ಯಾಯ, ಅಕ್ರಮದ ಮೂಲಕ ದೇಶವನ್ನು ಹಾಳು ಮಾಡುತ್ತಿದ್ದು, ಲಂಚವಿಲ್ಲದ ಯಾವುದೇ ಇಲಾಖೆಯಲ್ಲಿ ಕೆಲಸವಾಗುತ್ತಿಲ್ಲ. ಇದರ ವಿರುದ್ಧ ನಾವು ಹೋರಾಡಬೇಕಿದೆ. ನಮ್ಮ ಮುಂದಿನ ಪೀಳಿಗೆಗೆಯಾದರೂ ಇದರಿಂದ ಅನುಕೂಲವಾಗಲಿ ಎಂದು ಹೇಳಿದರು.

ರಾಜ್ಯ ಯುವ ಸಮಿತಿಯ ಸಂಘಟನಾ ಕಾರ್ಯದರ್ಶಿ ನಬಿರಸುಲ್ ಹುಣಶ್ಯಾಳ ಮಾತನಾಡಿ, ಸಿಂದಗಿ ತಾಲೂಕಿನ ಪ್ರತಿಯೊಂದು ಗ್ರಾಮದಲ್ಲಿ ಯುವನೇತಾ ಬೈಠಕ್ ಅಭಿಯಾನ ನಡೆಸುತ್ತೇವೆ. ಗ್ರಾಮೀಣ ಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಹೆಚ್ಚಿದ್ದು, ಅದರ ವಿರುದ್ಧ ಹೋರಾಟ ಮಾಡುತ್ತೇವೆ. ಶಾಲಾ, ಕಾಲೇಜು ವಿದ್ಯಾರ್ಥಿಗಳ ಸಮಸ್ಯೆಗಳ ಕುರಿತು ಹೋರಾಟ ನಡೆಸುತ್ತೇವೆ. ಮುಂದಿನ ತಿಂಗಳ ಅಂತ್ಯಕ್ಕೆ ಸಿಂದಗಿ ತಾಲೂಕಿನಲ್ಲಿ ಕೆಆರ್ ಎಸ್ ಪಕ್ಷದ ಸಮಿತಿಯನ್ನು ರಚನೆ ಮಾಡಲಾಗುತ್ತೆ ಎಂದು ಹೇಳಿದರು. ಈ ವೇಳೆ ಜಿಲ್ಲಾಧ್ಯಕ್ಷ ಅಶೋಕ ಜಾಧವ, ಪ್ರವೀಣ ಕನಸೆ, ನಾಗನಿಂಗ ನಾಟಿಕಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST