Ad imageAd image

ಯಾವುದೇ ಅನುಮಾನ ಬೇಡ, ನಾನೇ ಸಿಎಂ: ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಕೇಳಿ ಬಂದಿರುವ ಮುಡಾ ಹಗರಣದ ಆರೋಪದಿಂದಾಗಿ ಬಿಜೆಪಿ ನಾಯಕರು ರಾಜೀನಾಮೆ ಕೇಳುತ್ತಿದ್ದಾರೆ.

Nagesh Talawar
ಯಾವುದೇ ಅನುಮಾನ ಬೇಡ, ನಾನೇ ಸಿಎಂ: ಸಿಎಂ ಸಿದ್ದರಾಮಯ್ಯ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಕೇಳಿ ಬಂದಿರುವ ಮುಡಾ(MUDA) ಹಗರಣದ ಆರೋಪದಿಂದಾಗಿ ಬಿಜೆಪಿ ನಾಯಕರು ರಾಜೀನಾಮೆ ಕೇಳುತ್ತಿದ್ದಾರೆ. ಇನ್ನೊಂದು ಕಡೆ ನಾನು ಮುಂದಿನ ಸಿಎಂ ಎಂದು ಕೈ ನಾಯಕರ ದಂಡೇ ಬಹಿರಂಗವಾಗಿ ಹೇಳಿಕೆಗಳನ್ನು ನೀಡುತ್ತಿದೆ. ಹೀಗಾಗಿ ಸಿದ್ದರಾಮಯ್ಯನವರು(Siddaramaiah) ರಾಜೀನಾಮೆ ಸಲ್ಲಿಸುತ್ತಾರ ಎನ್ನುವ ಪ್ರಶ್ನೆ ಮೂಡಿದೆ. ಇದಕ್ಕೆ ಉತ್ತರಿಸಿರುವ ಅವರು, ಯಾವುದೇ ರೀತಿಯ ಅನುಮಾನ ಬೇಡ. ಸಿಎಂ ಆಗಿ ನಾನೇ ಮುಂದುವರೆಯುತ್ತೇನೆ. ನಾನು ಮುಂದೆ ಸಿಎಂ ಆಗಬಹುದು ಎಂದು ಕಾಂಗ್ರೆಸ್ ನಾಯಕರು ವೈಯಕ್ತಿಕ ಅಭಿಪ್ರಾಯ ನೀಡುತ್ತಿದ್ದಾರೆ ಎಂದಿದ್ದಾರೆ.

ಈ ವಿಚಾರದಲ್ಲಿ ಬಿಜೆಪಿಯವರು ಮಾತ್ರ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ನಾವು ಯಾವತ್ತೂ ದ್ವೇಷದ ರಾಜಕಾರಣ ಮಾಡಿಲ್ಲ. ಮಾಡೋದಿಲ್ಲ. ಬಿಜೆಪಿ ಸರ್ಕಾರವಿದ್ದ ಸಂದರ್ಭದಲ್ಲಿ 21 ಹಗರಣಗಳು ನಡೆದಿವೆ. ಅದರ ತನಿಖೆ ಮಾಡಿ ಸಚಿವ ಸಂಪುಟಕ್ಕೆ ವರದಿ ಸಲ್ಲಿಸಲು ಹೇಳಿದ್ದೇನೆ ಅಂತಾ ಹೇಳಿದರು.

WhatsApp Group Join Now
Telegram Group Join Now
Share This Article