Ad imageAd image

ಆಪರೇಷನ್ ಸಿಂಧೂರ: ಐಪಿಎಲ್ ಫೈನಲ್ ಪಂದ್ಯದಲ್ಲಿ ಸೇನಾ ಗೌರವ

Nagesh Talawar
ಆಪರೇಷನ್ ಸಿಂಧೂರ: ಐಪಿಎಲ್ ಫೈನಲ್ ಪಂದ್ಯದಲ್ಲಿ ಸೇನಾ ಗೌರವ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ನವದೆಹಲಿ(New Delhi): ಆಪರೇಷನ್ ಸಿಂಧೂರ ಯಶಸ್ವಿಯಾದ ಹಿನ್ನಲೆಯಲ್ಲಿ ಐಪಿಎಲ್ ಫೈನಲ್ ಪಂದ್ಯದಲ್ಲಿ ಸೇನಾ ಗೌರವ ಸಲ್ಲಿಸಲು ಬಿಸಿಸಿಐ ನಿರ್ಧರಿಸಿದೆ. ಹೀಗಾಗಿ ಜೂನ್ 3ರಂದು ಅಹಮದಾಬಾದ್ ನಲ್ಲಿ ನಡೆಯಲಿರುವ ಫೈನಲ್ ಪಂದ್ಯದಕ್ಕೆ ಮೂರು ಸೇನಾ ಪಡೆಯ ಮುಖ್ಯಸ್ಥರನ್ನು ಮಂಗಳವಾರ ಬಿಸಿಸಿಐ ಆಹ್ವಾನ ನೀಡಿದೆ. ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಈ ಬಗ್ಗೆ ತಿಳಿಸಿದ್ದಾರೆ.

ಆಪರೇಷನ್ ಸಿಂಧೂರ ಕಾರ್ಯಾಚರಣೆ ಮೂಲಕ ಸೈನಿಕರ ಧೈರ್ಯ, ಶೌರ್ಯ, ನಿಸ್ವಾರ್ಥ ಸೇವೆಯನ್ನು ನಾವು ಗೌರವಿಸುತ್ತೇವೆ. ಐಪಿಎಲ್ ಫೈನಲ್ ಪಂದ್ಯದ ಸಮಾರೋಪವನ್ನು ಸೈನಿಕರಿಗೆ ಅರ್ಪಿಸಲು ನಿರ್ಧರಿಸಲಾಗಿದೆ. ಭಾರತೀಯ ಸೇನೆಯ ಮೂರು ಪಡೆಗಳ ಮುಖ್ಯಸ್ಥರು, ಉನ್ನತ ಅಧಿಕಾರಿಗಳು, ಯೋಧರಿಗೆ ಆಹ್ವಾನ ನೀಡಲಾಗಿದೆ ಎಂದು ದೇವಜಿತ್ ಸೈಕಿಯಾ ಹೇಳಿದ್ದಾರೆ.

WhatsApp Group Join Now
Telegram Group Join Now
Share This Article