ಪ್ರಜಾಸ್ತ್ರ ಸುದ್ದಿ
ಶ್ರೀನಗರ(Srinagara): ಕಣಿವೆ ನಾಡಿನಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಭಯೋತ್ಪಾದಕರ ಕ್ರೌರ್ಯಕ್ಕೆ ಅಮಾಯಕ ಜೀವಗಳು ಬಲಿಯಾಗಿವೆ. ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 28 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇದರಲ್ಲಿ ಪ್ರವಾಸಕ್ಕೆ ಬಂದವರ ಸಂಖ್ಯೆ ಹೆಚ್ಚಿದೆ. ಈ ಘಟನೆಯಿಂದಾಗಿ ಪ್ರಧಾನಿ ಮೋದಿ ಎರಡು ದಿನಗಳ ಸೌದಿ ಅರೇಬಿಯಾ ಪ್ರವಾಸ ಮೊಟಕುಗೊಳಿಸಿ ಸ್ವದೇಶಕ್ಕೆ ವಾಪಸ್ ಆಗಿದ್ದಾರೆ.
ಪ್ರಧಾನಿ ಮೋದಿ ಬುಧವಾರ ಸಂಜೆ ಭಾರತಕ್ಕೆ ವಾಪಸ್ ಆಗಬೇಕಿತ್ತು. ಆದರೆ, ಕಣಿವೆ ನಾಡಿನಲ್ಲಿ ನಡೆದ ಭೀಕರ ಭಯೋತ್ಪಾದಕರ ದಾಳಿಯಿಂದಾಗಿ ಮಂಗಳವಾರ ರಾತ್ರಿಯೇ ವಾಪಸ್ ಆಗಿದ್ದಾರೆ. ಮಂಗಳವಾರ ಜೆಡ್ಡಾಗಿ ತೆರಳಿದ್ದ ಅವರು, ಸೌದಿ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದರು.