ವಿಧಾನಸೌಧ ಮುತ್ತಿಗೆಗೆ ರೈತ ಸಂಘ ರೆಡಿ

332

ಬೆಂಗಳೂರು: ರಾಜ್ಯ ಪ್ರವಾಹದ ಬಗ್ಗೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಧೋರಣೆ ಖಂಡಿಸಿ, ಅಕ್ಟೋಬರ್ 10ರಂದು ವಿಧಾನಸೌಧ ಮುತ್ತಿಗೆ ಹಾಕಲು ರೈತ ಸಂಘ ರೆಡಿಯಾಗಿದೆ.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಅಕ್ಟೋಬರ್ 10 ರಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ ಎಂದು ಹಸಿರು ಸೇನೆಯ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಹೇಳಿದ್ದಾರೆ. ಅಂದು ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಸಾವಿರಾರು ರೈತರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಅಂತಾ ಹೇಳಿದ್ದಾರೆ.

ನೆರೆ ಸಂತ್ರಸ್ತರಿಗಾಗಿ ತೆರೆದಿದ್ದ ತಾತ್ಕಾಲಿಕ ಗಂಜಿ ಕೇಂದ್ರಗಳನ್ನ ಸಹ ಮುಚ್ಚಲಾಗಿದೆ. ಇಂಥಾ ಧೋರಣೆಯನ್ನ ಖಂಡಿಸಿ ಪ್ರತಿಭಟನೆ ಮಾಡಲಾಗ್ತಿದೆ ಅಂತಾ ಹೇಳಿದ್ದಾರೆ.




error: Content is protected !!