ಪ್ರಜಾಸ್ತ್ರ ಸುದ್ದಿ
ರಾಯಚೂರು(Raichoru): ಕರ್ನಾಟಕ ಸಾರಿಗೆ ಬಸ್ ಹಾಗೂ ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿ ಐವರು ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಆಂಧ್ರದ ಪೆದ್ದ ತುಂಬಳಮಂ ಹತ್ತಿರ ಈ ದುರಂತ ನಡೆದಿದ್ದು, ಜಿಲ್ಲೆಯ ಮಾನ್ವಿಯ ಮೂವರು ಹಾಗೂ ಆಂಧ್ರದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಗಂಗಾವತಿಯಿಂದ ಕರ್ನೂಲ್ ಜಿಲ್ಲೆಯ ಆದೋನಿಗೆ ತೆರಳುವ ಸಂದರ್ಭದಲ್ಲಿ ಎರಡು ಬೈಕ್ ಹಾಗೂ ಬಸ್ ನಡುವೆ ಅಪಘಾತವಾಗಿದೆ. ಎರಡು ಬೈಕ್ ಸೇರಿ ಐವರು ಪ್ರಯಾಣಿಸುತ್ತಿದ್ದರು. ಬಸ್ಸಿನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮಾದವರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.