Ad imageAd image

7 ಜನರ ಜೀವ ಕಿತ್ತುಕೊಂಡ ಮಳೆರಾಯ

Nagesh Talawar
7 ಜನರ ಜೀವ ಕಿತ್ತುಕೊಂಡ ಮಳೆರಾಯ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಬುಧವಾರ ಸಿಲಿಕಾನ್ ಸಿಟಿಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ದುರಂತವೊಂದು ನಡೆದು ಹೋಗಿದೆ. ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯ ಆವರಣದಲ್ಲಿನ ಗೋಡೆ ಕುಸಿದು ಪುಟ್ಟ ಬಾಲಕಿ ಸೇರಿ 7 ಜನರು ಪ್ರಾಣ ಕಳೆದುಕೊಂಡಿದ್ದಾರೆ. 9 ಮಂದಿ ಗಾಯಗೊಂಡಿದ್ದಾರೆ. ಬುಧವಾರ ರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಗಾಯಾಳುಗಳನ್ನು ಬೌರಿಂಗ್ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿದಾಖಲಿಸಲಾಗಿದೆ. ಇಲ್ಲಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಲ್ಲಿನ ವೈದ್ಯರಿಗೆ ಸೂಚನೆ ನೀಡಿದರು. ಬೀದಿ ಬದಿಯಲ್ಲಿ ಬಟ್ಟೆ ವ್ಯಾಪಾರ, ಚಪ್ಪಲಿ ಮಾರುವ ಕೆಲಸ ಸೇರಿದಂತೆ ಸಣ್ಣಪುಟ್ಟ ಕೆಲಸ ಮಾಡಿ ಬದುಕು ಕಟ್ಟಿಕೊಂಡಿದ್ದ ಕುಟುಂಬಸ್ಥರಲ್ಲಿ ಇದೀಗ ನೀರವ ಮೌನ ಆವರಿಸಿದೆ. 6 ವರ್ಷದ ಮುಸವೀರ್ ಬೇಗಂ ಅನ್ನೋ ಬಾಲಕಿ ಸೇರಿ 7 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಬೇಸಿಗೆ ಬಿಸಿಲಿನಿಂದ ಬಸವಳಿದಿದ್ದ ಜನಕ್ಕೆ ಮಳೆ ತಂಪೆರೆಯುತ್ತೆ ಎಂದುಕೊಂಡಿದ್ದರೆ ಆಶ್ರಯ ಪಡೆದಿದ್ದ ಜನರ ಜೀವವನ್ನು ಬಲಿ ಪಡೆದಿದೆ.

WhatsApp Group Join Now
Telegram Group Join Now
Share This Article