Ad imageAd image

ಬೀದರ: ಬೃಹತ್ ಹಿಂದೂ ಜಾಗೃತಿ ಕಾರ್ಯಕ್ರಮಕ್ಕೆ ನಿರ್ಬಂಧ

ಇಲ್ಲಿನ ಸಾಯಿ ಶಾಲೆ ಮೈದಾನದಲ್ಲಿ ಹಿಂದೂ ರಾಷ್ಟ್ರೀಯ ಜಾಗರಣ ಸಮಿತಿಯಿಂದ ಭಾನುವಾರ ಸಂಜೆ ಆಯೋಜಿಸಿರುವ ಬೃಹತ್ ಹಿಂದೂ ಜಾಗೃತಿ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ.

Nagesh Talawar
ಬೀದರ: ಬೃಹತ್ ಹಿಂದೂ ಜಾಗೃತಿ ಕಾರ್ಯಕ್ರಮಕ್ಕೆ ನಿರ್ಬಂಧ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೀದರ(Bidara): ಇಲ್ಲಿನ ಸಾಯಿ ಶಾಲೆ ಮೈದಾನದಲ್ಲಿ ಹಿಂದೂ ರಾಷ್ಟ್ರೀಯ ಜಾಗರಣ ಸಮಿತಿಯಿಂದ ಭಾನುವಾರ ಸಂಜೆ ಆಯೋಜಿಸಿರುವ ಬೃಹತ್ ಹಿಂದೂ ಜಾಗೃತಿ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ. ಶ್ರೀರಾಮ್ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್, ಹೈದ್ರಾಬಾದ್ ನ ಬಿಜೆಪಿ ನಾಯಕಿ ಮಾಧವಿ ಲತಾ ಹಾಗೂ ಹಿಂದೂ ಕಾರ್ಯಕರ್ತೆ ಕಾಜಲ್ ಹಿಂದೂಸ್ತಾನಿ ಮುಖ್ಯ ಭಾಷಣಕಾರರಾಗಿ ಆಗಮಿಸುತ್ತಿದ್ದಾರೆ.

ಈ ಮೂವರು ಭಾಷಣಕಾರರು ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವ ಸಂಬಂಧ ಹಲವು ಪೊಲೀಸ್ ಠಾಣೆಗಳಲ್ಲಿ ಇವರ ವಿರುದ್ಧ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಭಾನುವಾರ ಸಂಜೆ ನಡೆಯುವ ಕಾರ್ಯಕ್ರಮಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಪ್ರಭಾರಿ ಜಿಲ್ಲಾಧಿಕಾರಿ ಡಾ.ಗಿರೀಶ್ ಬದೋಲೆ ಆದೇಶದಲ್ಲಿ ಹೇಳಿದ್ದಾರೆ.

WhatsApp Group Join Now
Telegram Group Join Now
Share This Article