Ad imageAd image

ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಕೊರತೆ: ಕೇಂದ್ರಕ್ಕೆ ಸಿಎಂ ಪತ್ರ

Nagesh Talawar
ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಕೊರತೆ: ಕೇಂದ್ರಕ್ಕೆ ಸಿಎಂ ಪತ್ರ
WhatsApp Group Join Now
Telegram Group Join Now

ಪ್ರಜಾಸ್ತ್ರ  ಸುದ್ದಿ

ಬೆಂಗಳೂರು(Bengaloru): ವಾಣಿಜ್ಯ ಬಳಕೆಯ ಸಿಲಿಂಡರ್ ಪೂರೈಕೆಯಲ್ಲಿ ಕೊರತೆ ಉಂಟಾದ ಹಿನ್ನಲೆಯಲ್ಲಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಮಸ್ಯೆಯಾಗಿದೆ. ಹೋಟೆಲ್, ರೆಸ್ಟೋರೆಂಟ್, ಕೆಟರಿಂಗ್ ಗಳಿಗೆ ಸಮಸ್ಯೆಯಾಗಿದ್ದು, ಬಂದ್ ಮಾಡುವ ಸ್ಥಿತಿ ಬಂದಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಪತ್ರ ಬರೆದಿದ್ದಾರೆ.

ಎಲ್ ಪಿಜಿಯನ್ನು ಕೇವಲ ಗೃಹ ಬಳಕೆದಾರರಿಗೆ ಮಾತ್ರ ಮಾರಾಟ ಮಾಡಬೇಕೆಂದು ಆದೇಶಿಸಲಾಗಿದೆ. ಈ ಮೂಲಕ ಮನೆಗಳಿಗೆ ಸಮಸ್ಯೆಯಾಗದಂತೆ ಗ್ಯಾಸ್ ಪೂರೈಕೆ ಮಾಡುವುದು ಇದರ ಹಿಂದಿನ ಉದ್ದೇಶವಾಗಿದೆ. ಆದರೆ, ವಾಣಿಜ್ಯ ಬಳಕೆಯ ಸಿಲಿಂಡರ್ ಕೊರತೆಯಿಂದ ಹಲವು ಸಮಸ್ಯೆಗಳಾಗುತ್ತಿದೆ ಎಂದು ಪತ್ರದಲ್ಲಿ ಬರೆಯಲಾಗಿದೆ. ಈ ಸಮಸ್ಯೆಯಿಂದ ಹೋಟೆಲ್, ರೆಸ್ಟೋರೆಂಟ್ ಗಳ ಮೇಲೆ ಲಕ್ಷಾಂತರ ಜನರು ಅವಲಂಬಿತರಾಗಿದ್ದು, ಅವರಿಗೆಲ್ಲ ತೊಂದರೆಯಾಗಿದೆ. ಇದನ್ನೆಲ್ಲ ಗಮನದಲ್ಲಿಟ್ಟುಕೊಂಡು ವಾಣಿಜ್ಯ ಬಳಕೆಯ ಸಿಲಿಂಡರ್ ಹೆಚ್ಚಿನ ಸಂಖ್ಯೆಯಲ್ಲಿ ಪೂರೈಕೆ ಮಾಡುವುದನ್ನು ಖಚಿತಪಡಿಸಬೇಕು ಎಂದು ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article