Ad imageAd image

ಸಿಂದಗಿ: ಉಗ್ರರ ದಾಳಿಯಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ

Nagesh Talawar
ಸಿಂದಗಿ: ಉಗ್ರರ ದಾಳಿಯಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಸಿಂದಗಿ(Sindagi): ಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟವರಿಗೆ ಪಟ್ಟಣದಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಂತಾಪ ಸೂಚಕದಲ್ಲಿ ಶಾಸಕ ಅಶೋಕ ಮನಗೂಳಿ ಭಾಗವಹಿಸಿ ಮೃತರ ಆತ್ಮಗಳಿಗೆ ಶಾಂತಿ ಕೋರಿದರು. ಅವರ ಕುಟುಂಬಸ್ಥರಿಗೆ ನೋವು ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಪೂಜಾರಿ ಮಾತನಾಡಿದರು.

ಈ ವೇಳೆ ಕಾಂಗ್ರೆಸ್ ಪಕ್ಷದ ಮುಖಂಡರಾದ ಕುಮಾರ ದೇಸಾಯಿ, ಗಂಗಾಧರ ರುಕುಂಪುರ, ಅಬ್ದುಲ್ ರಹೀಮ್ ದುದನಿ, ಪ್ರವೀಣ ಕಂಟಿಗೊಂಡ, ಸಾಯಿಬಣ್ಣ ಪುರದಾಳ, ನೂರಅಹ್ಮದ್ ಅತ್ತಾರ, ಜಯಶ್ರೀ ಹದನೂರ, ಸುನಂದಾ ಯಂಪೂರೆ, ಶಾರಧಾ ಬೆಟಗೇರಿ, ವರ್ಷಾ ಪಾಟೀಲ ಸೇರಿದಂತೆ ಅನೇಕರು ಭಾಗವಹಿಸಿದ್ದರು.

WhatsApp Group Join Now
Telegram Group Join Now
Share This Article