Ad imageAd image

ಸಿಂದಗಿ: ಬೆಂಕಿ ಅನಾಹುತಕ್ಕೆ 6 ಎಕರೆ ಕಬ್ಬು ಭಸ್ಮ

Nagesh Talawar
ಸಿಂದಗಿ: ಬೆಂಕಿ ಅನಾಹುತಕ್ಕೆ 6 ಎಕರೆ ಕಬ್ಬು ಭಸ್ಮ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಸಿಂದಗಿ(Sindagi): ಹೊಲದಲ್ಲಿ ಹಾಯ್ದು ಹೋದ ವಿದ್ಯುತ್ ತಂತಿಯ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಬ್ಬಿನ ಹೊಲಕ್ಕೆ ಬೆಂಕಿ ಹತ್ತಿದ ಘಟನೆ ಸಿಂದಗಿ ತಾಲೂಕಿನ ಸುಂಗಠಾಣದಲ್ಲಿ ನಡೆದಿದೆ. ಮಂಗಳವಾರ ಮಧ್ಯಾಹ್ನ ಸುಮಾರು 3 ಗಂಟೆಯ ಸಮಯದಲ್ಲಿ ಈ ಒಂದು ಘಟನೆ ನಡೆದಿದೆ. ಸುಂಗಠಾಣ ಗ್ರಾಮದ ಹಣಮಂತಪ್ಪ ಗುರಲಿಂಗಪ್ಪ ಬಿರಾದಾರ ಎಂಬುವರ 6 ಎಕರೆ ಕಬ್ಬಿನ ಹೊಲದಲ್ಲಿ ಬೆಂಕಿ ಕಾಣಿಸಿಕೊಂಡು ಕಬ್ಬು ಸಂಪೂರ್ಣವಾಗಿ ಸುಟ್ಟು ಹೋಗಿದೆ.

ಅಂದಾಜು 7 ಲಕ್ಷ ಮೌಲ್ಯದ ಕಬ್ಬು ಸುಟ್ಟು ಹೋಗಿದೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಬಂದು ಬೆಂಕಿ ನಂದಿಸುವ ಕೆಲಸ ಮಾಡಿದರು. ಅಷ್ಟರಲ್ಲಿಯೇ ಬಹುತೇಕ ಕಬ್ಬು ಬೆಂಕಿಗೆ ಆಹುತಿ ಆಗಿತ್ತು ಎಂದು ತಿಳಿದು ಬಂದಿದೆ. ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

WhatsApp Group Join Now
Telegram Group Join Now
Share This Article