Ad imageAd image

ಕೊಲೆ ಚಾರ್ಜ್ ಶೀಟ್ ಸಲ್ಲಿಕೆ: ಪವಿತ್ರಾಗೌಡ ಎ1, ದರ್ಶನ್ ಎ2

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತನ ಕೊಲೆ ಪ್ರಕರಣ ಸಂಬಂಧ ಪೊಲೀಸರು ಬುಧವಾರ ನ್ಯಾಯಾಲಕ್ಕೆ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ.

Nagesh Talawar
ಕೊಲೆ ಚಾರ್ಜ್ ಶೀಟ್ ಸಲ್ಲಿಕೆ: ಪವಿತ್ರಾಗೌಡ ಎ1, ದರ್ಶನ್ ಎ2
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತನ ಕೊಲೆ(Murder Case) ಪ್ರಕರಣ ಸಂಬಂಧ ಪೊಲೀಸರು ಬುಧವಾರ ನ್ಯಾಯಾಲಕ್ಕೆ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ. ನಟ ದರ್ಶನ್(Darshan), ಆಪ್ತ ಗೆಳತಿ ಪವಿತ್ರಾಗೌಡ ಸೇರಿದಂತೆ 17 ಆರೋಪಿಗಳ ವಿರುದ್ಧ ಮೊದಲ ದೋಷಾರೋಪ ಪಟ್ಟಿ ಸಲ್ಲಸಾಗಿದೆ. ಕೊಲೆ ಪ್ರಕರಣದ ತನಿಖಾ ತಂಡ ಬರೋಬ್ಬರಿ 3,991 ಪುಟಗಳ ದೋಷಾರೋಪ(Shargesheet) ಪಟ್ಟಿಯ 20 ಪ್ರತಿಗಳನ್ನು ಕೋರ್ಟ್ ಗೆ ಸಲ್ಲಿಸಿದೆ.

ಈ ಪ್ರಕರಣದಲ್ಲಿ 231ಕ್ಕೂ ಹೆಚ್ಚು ಸಾಕ್ಷಾದಾರರ ಹೇಳಿಕೆಯನ್ನು ದಾಖಲಿಸಲಾಗಿದೆ. 8 ವರದಿಗಳಿಗೆ. ಮೂವರು ಪ್ರತ್ಯಕ್ಷ ಸಾಕ್ಷಿಗಳಿವೆ. 27 ಜನರಿಂದ 164 ಹೇಳಿಕೆಗಳನ್ನು ಪಡೆಯಲಾಗಿದೆ. 59 ಜನರಿಂದ ಪಂಚನಾಮೆ, 56 ಪೊಲೀಸರು ಇದರಲ್ಲಿ ಕೆಲಸ ನಿರ್ವಹಿಸಿದ್ದಾರೆ. 8 ಇತರೆ ಸರ್ಕಾರಿ ಅಧಿಕಾರಿಗಳ ಹೇಳಿಕೆಗಳಿವೆ. ಈಗ ಸಲ್ಲಿಸಿರುವುದು ಪ್ರಾಥಮಿಕ ತನಿಖಾ ವರದಿಯಾಗಿದೆ. ತನಿಖೆ ಪೂರ್ಣಗೊಂಡ ಮೇಲೆ ಮತ್ತೊಂದು ದೋಷಾರೋಪ ಪಟ್ಟಿ ಸಲ್ಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article