ಪ್ರಜಾಸ್ತ್ರ ಸುದ್ದಿ
ಮಂಗಳೂರು(Mangalore): ಹಿಂದೂಪರ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಕೇಂದ್ರ ಗೃಹ ಇಲಾಖೆ ವಹಿಸಿದೆ. ಈ ಕುರಿತು ಆದೇಶ ನೀಡಿದೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ. ಈಗಾಗ್ಲೇ ಸಿಸಿಬಿ ತನಿಖೆ ನಡೆಸುತ್ತಿದ್ದು, ಇದುವರೆಗೂ 12 ಆರೋಪಿಗಳನ್ನು ಬಂಧಿಸಿದೆ. ಬಜಪೆಯ ಕಿನ್ನಿಪದವಿನಲ್ಲಿ ಮೇ 1ರಂದು ದುಷ್ಕರ್ಮಿಗಳು ತಲ್ವಾರ್ ನಿಂದ ಕೊಚ್ಚಿ ಕೊಲೆ ಮಾಡಿದ್ದರು.