Ad imageAd image

ಪಶ್ಚಿಮ ಬಂಗಾಳ: ಸುವೇಂದು ಆಪ್ತನ ಭೀಕರ ಹತ್ಯೆ

Nagesh Talawar
ಪಶ್ಚಿಮ ಬಂಗಾಳ: ಸುವೇಂದು ಆಪ್ತನ ಭೀಕರ ಹತ್ಯೆ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಕೋಲ್ಕತ್ತಾ(Kolkata): ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಬಳಿಕ ಸಾಕಷ್ಟು ಹಿಂಸಾಚಾರ ಘಟನೆಗಳು ನಡೆಯುತ್ತಿವೆ. ಬಿಜೆಪಿ ನಾಯಕ ಸುವೇಂದು ಅಧಿಕಾರಿ ನೂತನ ಸಿಎಂ ಎಂದು ಹೇಳಲಾಗುತ್ತಿದೆ. ಈ ಹೊತ್ತಿನಲ್ಲಿ ಇವರ ಆಪ್ತ ಚಂದ್ರನಾಥ್ ರಥ್ ಅವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಉತ್ತರ ಪರಗಣ್ 24 ಜಿಲ್ಲೆಯಲ್ಲಿ ಚಂದ್ರನಾಥ್(41) ಇವರನ್ನು ನಿನ್ನೆ ಕೊಲೆ ಮಾಡಲಾಗಿದೆ.

ಈ ಬಗ್ಗೆ ಮಾತನಾಡಿರುವ ಸುವೇಂದು, ಇದೊಂದು ಪೂರ್ವನಿಯೋಜಿತ ಕೃತ್ಯ ಎಂದಿದ್ದಾರೆ. ಕಳೆದ 15 ವರ್ಷಗಳಿಂದ ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ತೃಣಮೂಲ ಕಾಂಗ್ರೆಸ್ಸಿನ ಮಹಾಜಂಗಲ್ ರಾಜ್ ನ ಪ್ರತಿಫಲ ಅಂತಾ ವಾಗ್ದಾಳಿ ನಡೆಸಿದ್ದಾರೆ. ಕೊಲೆ ಮಾಡುವುದಕ್ಕೂ ಮೊದಲು ದುಷ್ಕರ್ಮಿಗಳು ಸ್ಥಳಕ್ಕೆ ಭೇಟಿ ನೀಡಿ ಯೋಜನೆ ಸಿದ್ಧಪಡಿಸಿದ್ದರು. ಬಸಿರ್ಹತ್ ಹಾಗೂ ಬರಾನಗರದಲ್ಲಿಯೂ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆಗಳು ನಡೆದಿವೆ. ಪೊಲೀಸರು ತನಿಖೆ ನಡೆಸುತ್ತಿದ್ದು, ನಾವು ಯಾವುದೇ ನಿರ್ಧಾರಕ್ಕೆ ಬರಲು ಸಾಧ್ಯವಿಲ್ಲ ಎಂದಿದ್ದಾರೆ.

WhatsApp Group Join Now
Telegram Group Join Now
Share This Article