Ad imageAd image

ಪ್ರಾಸಿಕ್ಯೂಷನ್ ಗೆ ಅನುಮತಿ: ಸಚಿವ ಸಂಪುಟ ಸಭೆ ಕರೆದ ಸಿಎಂ

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರ್

Nagesh Talawar
ಪ್ರಾಸಿಕ್ಯೂಷನ್ ಗೆ ಅನುಮತಿ: ಸಚಿವ ಸಂಪುಟ ಸಭೆ ಕರೆದ ಸಿಎಂ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಮುಡಾ(MUDA) ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅನುಮತಿ ನೀಡಿದ್ದಾರೆ. ಹೀಗಾಗಿ ಇಂದು ಸಂಜೆ 5 ಗಂಟೆಗೆ ಮುಖ್ಯಮಂತ್ರಿಗಳು ಸಚಿವ ಸಂಪುಟ(Cabinet Meeting) ಸಭೆ ಕರೆದಿದ್ದಾರೆ. ಇದರಿಂದಾಗಿ ರಾಜ್ಯ ರಾಜಕಾರಣದಲ್ಲಿ ದೊಡ್ಡ ಹೋರಾಟಕ್ಕೆ ವೇದಿಕೆ ಸಿದ್ಧವಾಗಲಿದೆ. ವಿಪಕ್ಷಗಳು ಸಿಎಂ ರಾಜೀನಾಮಗೆ ಆಗ್ರಹಿಸಿದ್ದಾರೆ. ಈ ಬಗ್ಗೆ ಸಿಎಂ ಕಾನೂನು ಸಲಹೆಗಾರ ಎ.ಎಸ್ ಪೊನ್ನಣ್ಣ ಅವರೊಂದಿಗೆ ಚರ್ಚಿಸಲಿದ್ದಾರೆ.

ಸಭೆಯಲ್ಲಿ ಸಿಎಂ, ಡಿಸಿಎಂ, ಸಚಿವರು, ಸರ್ಕಾರದ ಮುಖ್ಯ ಕಾರ್ದದರ್ಶಿಗಳು, ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳು, ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಅವರಿಗೆ ಸಭೆಯಲ್ಲಿ ಭಾಗವಹಿಸಲು ತಿಳಿಸಲಾಗಿದೆ. ಇಂದು ಸಂಜೆ 5 ಗಂಟೆಗೆ ವಿಧಾನಸೌಧದ 3ನೇ ಮಹಡಿಯಲ್ಲಿರುವ ಸಚಿವ ಸಂಪುಟ ಸಭಾಮಂದಿರದಲ್ಲಿ ಸಭೆಯನ್ನು ಕರೆಯಲಾಗಿದೆ.

WhatsApp Group Join Now
Telegram Group Join Now
Share This Article