Ad imageAd image

ತನ್ನ ವೈಫಲ್ಯ ಮುಚ್ಚಿಹಾಕಲು ಸರ್ಕಾರದಿಂದ ಸದನ ದುರುಪಯೋಗ: ಹೆಚ್ಡಿಕೆ

Nagesh Talawar
ತನ್ನ ವೈಫಲ್ಯ ಮುಚ್ಚಿಹಾಕಲು ಸರ್ಕಾರದಿಂದ ಸದನ ದುರುಪಯೋಗ: ಹೆಚ್ಡಿಕೆ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲರ ನಡುವಿನ ಸಂಘರ್ಷಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಮಾತನಾಡಿದ್ದು, ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ರಾಜ್ಯ ಸರ್ಕಾರ ಜಂಟಿ ಅಧಿವೇಶನವನ್ನು ದುರುಪಯೋಗ ಪಡಿಸಿಕೊಂಡಿದೆ ಎಂದು ಹೇಳಿದ್ದಾರೆ. ಈ ಮೂಲಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸರ್ಕಾರ ಸಿದ್ಧಪಡಿಸಿದ ಭಾಷಣದ ಬದಲು ತಾವೇ ಸಿದ್ಧಪಡಿಸಿದ ಭಾಷಣ ಓದಿದ್ದನ್ನು ಸಮರ್ಥಿಸಿಕೊಂಡಿದ್ದಾರೆ.

ಸರ್ಕಾರದ ಸಣ್ಣತನದಿಂದಾಗಿ ಕರ್ನಾಟಕದಲ್ಲಿ ಇಂತಹದೊಂದು ಪ್ರಕರಣ ಮೊದಲು ಬಾರಿಗೆ ನಡೆದಿದೆ. ತನ್ನ ತಪ್ಪುಗಳನ್ನು ಮರೆಮಾಚಲು ಈ ಸರ್ಕಾರ ಅಧಿವೇಶನ ದುರುಪಯೋಗ ಪಡಿಸಿಕೊಂಡಿದೆ. ಬೀದಿಯಲ್ಲಿ ಚರ್ಚೆ ಮಾಡುವಂತಹ ವಿಚಾರಗಳನ್ನು ಸರ್ಕಾರ ಮತ್ತು ಮಂತ್ರಿಗಳು ರಾಜ್ಯಪಾಲರ ಮೂಲಕ ಹೇಳಿಸಬೇಕು ಎಂದು ಬಯಸಿದ್ದರು. ಹೀಗಾಗಿ ಇಂತಹ ಘಟನೆ ನಡೆದಿದೆ ಅಂತಾ ಹೇಳಿದ್ದಾರೆ.

WhatsApp Group Join Now
Telegram Group Join Now
Share This Article