ಪ್ರಜಾಸ್ತ್ರ ಸುದ್ದಿ
ಹೊಸದುರ್ಗ(Hosadurga): ಕಳೆದ ಏಪ್ರಿಲ್ 22ರಂದು ನಡೆದ ಲೋಕಾಯುಕ್ತ ದಾಳಿ ವೇಳೆ ಹೊಸದುರ್ಗ ಪುರಸಭೆ ಮುಖ್ಯಾಧಿಕಾರಿ ತಿಮ್ಮರಾಜು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು. ಶನಿವಾರ ಮುಂಜಾನೆ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ವಿಚಾರಣಾಧೀನ ಕೈದಿಯಾಗಿದ್ದರು. ಇ ಖಾತೆ ಮಾಡಿಕೊಡಲು ಶಂಕರಪ್ಪ ಎಂಬುವರಿಗೆ 50 ಸಾವಿರ ರೂಪಾಯಿ ಬೇಡಿಕೆ ಇಟ್ಟಿದ್ದರು. 25 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ಕೈಗೆ ಸಿಕ್ಕಿಬಿದ್ದಿದ್ದರು.