Ad imageAd image

ಸಿಎಂ ವಿರುದ್ಧ ತನಿಖೆ ಶುರು, ಸ್ಥಳ ಮಹಜರು

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೂವರು ದೂರು ಸಲ್ಲಿಸಿದ್ದಾರೆ. ಅದರಲ್ಲಿ ಸ್ನೇಹಮಯಿ ಕೃಷ್ಣ ಒಬ್ಬರಾಗಿದ್ದು,

Nagesh Talawar
ಸಿಎಂ ವಿರುದ್ಧ ತನಿಖೆ ಶುರು, ಸ್ಥಳ ಮಹಜರು
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಮೈಸೂರು(Mysore): ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೂವರು ದೂರು ಸಲ್ಲಿಸಿದ್ದಾರೆ. ಅದರಲ್ಲಿ ಸ್ನೇಹಮಯಿ ಕೃಷ್ಣ ಒಬ್ಬರಾಗಿದ್ದು, ಮೈಸೂರು ಲೋಕಾಯುಕ್ತ ಪೊಲೀಸರು ಮಂಗಳವಾರದಿಂದ ತನಿಖೆ ನಡೆಸಿದ್ದಾರೆ. ಇಂದು ಸ್ನೇಹಮಯಿ ಕೃಷ್ಣ ಅವರೊಂದಿಗೆ ಸ್ಥಳ ಮಹಜರು ನಡೆಸಲಾಗಿದೆ. ಹೀಗಾಗಿ ಮುಡಾ ನಿವೇಶನದ ಹತ್ತಿರ ಕರೆದುಕೊಂಡು ಹೋಗಲಾಗಿದೆ.

ಈ ಬಗ್ಗೆ ಮಾತನಾಡಿರುವ ಸ್ನೇಹಮಯಿ ಕೃಷ್ಣ, ತನಿಖೆಗೆ ನಾನು ಸಂಪೂರ್ಣವಾಗಿ ಸಹಕರಿಸುತ್ತೇನೆ. ನನ್ನ ಹತ್ತಿರ ಇರುವ ದಾಖಲೆಗಳನ್ನು ಕೊಡುತ್ತೇನೆ. ಸಾಕ್ಷಿಗಳಿಲ್ಲದೆ ನಾನು ಸುಳ್ಳು ಆರೋಪ ಮಾಡುವುದಿಲ್ಲ. ಈ ಪ್ರಕರಣದಲ್ಲಿ ನಾನು ಗೆಲ್ಲುತ್ತೇನೆ ಅಂತಾ ಹೇಳಿದ್ದಾರೆ. ಇನ್ನೊಂದು ಕಡೆ ಇವರು ಇಡಿಗೂ ಸಹ ದೂರು ಸಲ್ಲಿಸಿದ್ದಾರೆ. ಒಟ್ಟಿನಲ್ಲಿ ಸಿದ್ದರಾಮಯ್ಯನವರನ್ನು ಬೆನ್ನು ಬಿಡದೆ ಕಾಡುತ್ತಿದ್ದಾರೆ.

WhatsApp Group Join Now
Telegram Group Join Now
Share This Article