ಪ್ರಜಾಸ್ತ್ರ ಸುದ್ದಿ
ಚಿಕ್ಕಬಳ್ಳಾಪುರ(Chikkaballapura): ಯುವಕನೊಬ್ಬನನ್ನು ಕಲ್ಲಿನಿಂದ ಜಜ್ಜಿ ಬೆಳ್ಳಂಬೆಳಗ್ಗೆ ಕೊಲೆ ಮಾಡಿರುವ ಘಟನೆ ನಗರದ ಬಿ.ಬಿ ರಸ್ತೆಯ ಎಸ್ ಬಿಐ ಬ್ಯಾಂಕ್ ಹತ್ತಿರ ನಡೆದಿದೆ. ಬುಧವಾರ ಮುಂಜಾನೆ ಈ ಕೃತ್ಯ ನಡೆದಿದೆ. ಚಾಮರಾಜಪೇಟೆ ಕಾಲೋನಿಯ ನಿವಾಸಿ ಶ್ರೀಕಾಂತ್ ಕೊಲೆಯಾದ ಯುವಕನಾಗಿದ್ದಾನೆ. ದುಷ್ಕರ್ಮಿಗಳ ಕೃತ್ಯದಿಂದ ನಗರದ ಜನತೆ ಆತಂಕಕ್ಕೆ ಒಳಗಾಗಿದ್ದಾರೆ.
ಶ್ರೀಕಾಂತಗೆ ಈಗಾಗ್ಲೇ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ವೈಲ್ಡಿಂಗ್ ಕೆಲಸ ಮಾಡಿಕೊಂಡು ಜೀವನ ಮಾಡುತ್ತಿದ್ದ. ದುಷ್ಕರ್ಮಿಗಳು ಯಾವ ಕಾರಣಕ್ಕೆ ಈ ಕೊಲೆ ಮಾಡಿದ್ದಾರೆ ಅನ್ನೋದು ಇನ್ನು ತಿಳಿದು ಬಂದಿಲ್ಲ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೇಟಿ ನೀಡಿದ್ದಾರೆ.