Ad imageAd image

ನಿಜಕ್ಕೂ ಇದು ಆಘಾತಕಾರಿ ಸುದ್ದಿ

ಹೃದಯಾಘಾತದಿಂದ 8ನೇ ತರಗತಿ ವಿದ್ಯಾರ್ಥಿ ಮೃತಪಟ್ಟ ದಾರುಣ ಘಟನೆ ಜಿಲ್ಲೆಯ ಆಲೂರು ತಾಲೂಕಿನ ಚನ್ನಾಪುರ ಗ್ರಾಮದಲ್ಲಿ ನಡೆದಿದೆ.

Nagesh Talawar
ನಿಜಕ್ಕೂ ಇದು ಆಘಾತಕಾರಿ ಸುದ್ದಿ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಹಾಸನ(Hasana): ಹೃದಯಾಘಾತದಿಂದ 8ನೇ ತರಗತಿ ವಿದ್ಯಾರ್ಥಿ(Stundetn) ಮೃತಪಟ್ಟ ದಾರುಣ ಘಟನೆ ಜಿಲ್ಲೆಯ ಆಲೂರು ತಾಲೂಕಿನ ಚನ್ನಾಪುರ ಗ್ರಾಮದಲ್ಲಿ ನಡೆದಿದೆ. ಸಚಿನ್ ಮೃತ ಬಾಲಕ ಎಂದು ತಿಳಿದು ಬಂದಿದೆ. ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಶಾಲೆಗೆ ಹೋಗದೆ ಮನೆಯಲ್ಲಿದ್ದಾಗ ಕುಸಿದುಬಿದ್ದು ಮೃತಪಟ್ಟಿದ್ದಾನೆ ಎಂದು ಹೇಳಲಾಗುತ್ತಿದೆ.

ವಿದ್ಯಾರ್ಥಿ ಸಚಿನ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿದ್ದ. ಮಗನನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ನೋಡದಂತಾಗಿದೆ. ಘಟನೆಯಿಂದ ಇಡೀ ಗ್ರಾಮದಲ್ಲಿ ನೀರವಮೌನ ಆವರಿಸಿಕೊಂಡಿದೆ. ಇನ್ನು ಇತ್ತೀಚಿನ ದಿನಗಳಲ್ಲಿ ಸಣ್ಣ ಮಕ್ಕಳಲ್ಲಿ ಹೃದಯಾಘಾತ(Heart Attack) ಕಾಣಿಸಿಕೊಳ್ಳುತ್ತಿದ್ದು, ಪೋಷಕರಿಗೆ ಆತಂಕ ಮೂಡಿಸಿದೆ.

WhatsApp Group Join Now
Telegram Group Join Now
Share This Article