ಪ್ರಜಾಸ್ತ್ರ ಸುದ್ದಿ
ರಾಯವರಂ(Rayavarm): ಟಿಪ್ಪರ್ ಗೆ ಖಾಸಗಿ ಬಸ್ ವೊಂದು ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, 8 ಜನರು ಸಜೀವ ದಹನವಾಗಿದ್ದಾರೆ. 18 ಮಂದಿ ಗಾಯಗೊಂಡಿದ್ದಾರೆ. ಗುರುವಾರ ಮುಂಜಾನೆ ಇಂತಹದೊಂದು ದುರ್ಘಟನೆ ಆಂಧ್ರಪ್ರದೇಶದ ಮಾರ್ಕಪುರಂ ಹತ್ತಿರ ನಡೆದಿದೆ.
ಜಲ್ಲಿ ತುಂಬಿದ್ದ ಟಿಪ್ಪರ್ ಗೆ ಬಸ್ ಡಿಕ್ಕಿಯಾಗಿದೆ. ಗಾಯಾಳುಗಳನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ. ಅಪಘಾತಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.




