ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಜಿಲ್ಲೆಯ ಚಡಚಣ ತಾಲೂಕಿನ ಹತ್ತಳ್ಳಿ ಹಾಗೂ ದೇವರಹಿಪ್ಪರಗಿ ತಾಲೂಕಿನ ಮಾರ್ಕಬ್ಬಿನಹಳ್ಳಿ ಗ್ರಾಮಗಳಲ್ಲಿ ರೈತ-ರೈತ ಮಹಿಳೆಯರಿಗೆ ಮುಂಗಾರು ಪೂರ್ವ ಕೈಗೊಳ್ಳಬೇಕಾದ ಕೃಷಿ ಚಟುವಟಿಕೆ ಕುರಿತು ಜೂನ್ 5 ಹಾಗೂ 6 ರಂದು ಒಂದು ದಿನದ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಜೂನ್ 5 ರಂದು ಹತ್ತಳ್ಳಿ ಹಾಗೂ ಜೂನ್ 6 ರಂದು ಮಾರ್ಕಬ್ಬಿನಹಳ್ಳಿ ಗ್ರಾಮಗಳಲ್ಲಿ ತರಬೇತಿ ಆಯೋಜಿಸಲಾಗಿದ್ದು, ಆಸಕ್ತ ರೈತರು ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಕೃಷಿ ಅಧಿಕಾರಿ ಲಕ್ಷ್ಮಿ ಕಾಮಗೊಂಡ ಮೊಬೈಲ್ 8050277792 ಸಂಖ್ಯೆಗೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.