Ad imageAd image

ಅನಧಿಕೃತ ಗುಂಟಾ ಲೇಔಟ್ ತೆರವು ಕಾರ್ಯಾಚರಣೆ

Nagesh Talawar
ಅನಧಿಕೃತ ಗುಂಟಾ ಲೇಔಟ್ ತೆರವು ಕಾರ್ಯಾಚರಣೆ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ನಗರಾಭಿವೃದ್ದಿ ಪ್ರಾಧಿಕಾರ ಹಾಗೂ ಮಹಾನಗರ ಪಾಲಿಕೆಗಳ ಪರವಾನಿಗೆ ಪಡೆಯದೇ ಅನಧಿಕೃತವಾಗಿ ನಿರ್ಮಾಣ ಮಾಡಿದ ತುಂಡು ಜಮೀನು (ಗುಂಟೆವಾರು) ಅಭಿವೃದ್ದಿ ಪಡಿಸುತ್ತಿರುವುದನ್ನು ಕಾರ್ಯಾಚರಣೆ ನಡೆಸಿ ಬುಧವಾರ ತೆರವುಗೊಳಿಸಲಾಯಿತು ಎಂದು ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ ಅವರು ತಿಳಿಸಿದ್ದಾರೆ.

ವಿಜಯಪುರ ತಾಲೂಕಿನ ಮಹಾಲ್‌ಬಾಗಾಯತ ಗ್ರಾಮದ ಸರ್ವೆ ನಂ.837/*/7ರ ಕ್ಷೇತ್ರ 2ಎಕರೆ 3 ಗುಂಟೆ ಪ್ರದೇಶದ ಜಮೀನುದಾರರು ಕಂದಾಯ ಇಲಾಖೆ, ನಗರಾಭಿವೃದ್ದಿ ಪ್ರಾಧಿಕಾರ ಹಾಗೂ ಮಹಾನಗರ ಪಾಲಿಕೆ ಪರವಾನಿಗೆ ಪಡೆಯದೇ ಅನಧಿಕೃತವಾಗಿ ತುಂಡು ಜಮೀನು ಮಾಡುತ್ತಿರುವುದರಿಂದ ಸಂಬಂಧಿಸಿದ ಮಾಲೀಕರಿಗೆ ನೋಟಿಸ್ ನೀಡಿ ತೆರವುಗೊಳಿಸಲು ತಿಳಿಸಲಾಗಿತ್ತಾದರೂ, ತೆರವುಗೊಳಿಸದೇ ಇರುವುದರಿಂದ ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಮಹಾನಗರ ಪಾಲಿಕೆ ಇವರ ಸಹಯೋಗದೊಂದಿಗೆ ಜುಲೈ 2 ರಂದು ಕಾರ್ಯಾಚರಣೆ ಕೈಗೊಂಡು ತೆರವುಗೊಳಿಸಲಾಯಿತು.

ತೆರವು ಕಾರ್ಯಾಚರಣೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ತಹಶೀಲ್ದಾರ್ ಪ್ರಶಾಂತ ಚನಗೊಂಡ, ಆದರ್ಶನ ನಗರ ಪೊಲಿಸ್ ಠಾಣೆಯ ಸಬ್‌ಇನ್ಸ್ಪೆಕ್ಟರ್ ಸೀತಾರಾಮ ಲಮಾಣಿ ಹಾಗೂ ಮಹಾನಗರ ಪಾಲಿಕೆ, ತಹಶೀಲ್ದಾರ್ ಕಚೇರಿ ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article