ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಉಪ ರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದಂತೆ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ಸಿ.ಪಿ ರಾಧಾಕೃಷ್ಣನ್ ಅವರು ಬುಧವಾರ ನಾಮಪತ್ರ ಸಲ್ಲಿಸಿದರು. ಈ ವೇಳೆ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಸೇರಿದಂತೆ ಹಲವು ನಾಯಕರಿದ್ದರು.
ಚುನಾವಣಾಧಿಕಾರಿಯಾಗಿರುವ ರಾಜ್ಯಸಭಾ ಕಾರ್ಯದರ್ಶಿ ಪಿ.ಸಿ ಮೋದಿಯವರಿಗೆ, ನಾಲ್ಕು ಸೆಟ್ ಗಳ ನಾಮಪತ್ರವನ್ನು ಸಲ್ಲಿಸಲಾಯಿತು. ಇದಕ್ಕೆ ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ಜೆಡಿಯು ನಾಯಕ ರಾಜೀವ್ ರಂಜ್ ಸಿಂಗ್ ಅನುಮೋದಕರಾಗಿ ಸಹಿ ಮಾಡಿದರು.